ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕರಿಬ್ಬರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ.
ಕಾರು ಚಾಲಕರಾದ ಆದರ್ಶ ಮತ್ತು ಸಂಕಪ್ಪ ಅವರು ಗಾಯಗೊಂಡವರು. ಸಜೀಪ ಮೂಡ ಗ್ರಾಮದ ಬೇಂಕ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.
ಮುಡಿಪು ಕಡೆಯಿಂದ ಮತ್ತು ಮೆಲ್ಕಾರ್ ಕಡೆಯಿಂದ ಬರುತ್ತಿದ್ದ ಕಾರುಗಳ ಮಧ್ಯೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ. ಆದರೆ ಎರಡು ಕಾರಿನಲ್ಲಿ ಕಾರು ಚಾಲಕರು ಮಾತ್ರ ಇದ್ದು , ಅದೃಷ್ಟವಶಾತ್ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.