Categories: ಮಂಗಳೂರು

ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ, ಚಾಲಕರು ಪಾರು

ಬಂಟ್ವಾಳ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರು ಚಾಲಕರಿಬ್ಬರು ಅಲ್ಪಸ್ವಲ್ಪ ಗಾಯಗಳಿಂದ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾದ ಘಟನೆ ಬಂಟ್ವಾಳ ಟ್ರಾಫಿಕ್ ಪೋಲೀಸ್ ಠಾಣಾ ವ್ಯಾಪ್ತಿಯ ಬೆಂಕ್ಯ ಎಂಬಲ್ಲಿ ನಡೆದಿದೆ.

ಕಾರು ಚಾಲಕರಾದ ಆದರ್ಶ ಮತ್ತು ಸಂಕಪ್ಪ ಅವರು ಗಾಯಗೊಂಡವರು. ಸಜೀಪ ಮೂಡ ಗ್ರಾಮದ ಬೇಂಕ್ಯ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದ ಸಮೀಪದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ‌ಡಿಕ್ಕಿಯಾಗಿದೆ.

ಮುಡಿಪು ಕಡೆಯಿಂದ ಮತ್ತು ಮೆಲ್ಕಾರ್ ಕಡೆಯಿಂದ ಬರುತ್ತಿದ್ದ ಕಾರುಗಳ ಮಧ್ಯೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಎರಡು ಕಾರುಗಳು ಜಖಂಗೊಂಡಿದೆ. ಆದರೆ ಎರಡು ಕಾರಿನಲ್ಲಿ ಕಾರು ಚಾಲಕರು ಮಾತ್ರ ಇದ್ದು , ಅದೃಷ್ಟವಶಾತ್ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Ashika S

Recent Posts

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

5 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

7 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

22 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

24 mins ago

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ ಮಾಜಿ ಶಾಸಕ, ಬಿಜೆಪಿ ರಾಜ್ಯ ಪ್ರಧಾನ…

49 mins ago

ತೆಲುಗಿನ ತ್ರಿನಯನಿ ಧಾರಾವಾಹಿಯಲ್ಲಿ ಮಿಂಚಿದ ಕನ್ನಡತಿಯ ದುರಂತ ಅಂತ್ಯ

ತೆಲುಗು ಸಿನಿಮಾ ಹಾಗೂ ಕಿರುತೆರೆಯಲ್ಲಿ ಅಭಿನಯಿಸಿದ ಬಹಳಷ್ಟು ಕನ್ನಡಿಗರು ಸಕ್ಸಸ್ ಕಂಡಿದ್ದಾರೆ. ತೆಲುಗು ಕಿರುತೆರೆಯಲ್ಲಿ ಕರ್ನಾಟಕದ ಕಲಾವಿದರಿಗೆ ಸಾಕಷ್ಟು ಬೇಡಿಕೆಯೂ…

1 hour ago