Categories: ಮಂಗಳೂರು

ಬಂಟ್ವಾಳ: ಬೃಹತ್ ಗಾತ್ರದ ಮರ ರಸ್ತೆಗೆ ಬಿದ್ದು ಸಂಚಾರಕ್ಕೆ ಅಡಚಣೆ

ಬಂಟ್ವಾಳ: ಇಂದು ಬೆಳಿಗ್ಗೆಯಿಂದ ಸುರಿದ ಬಾರಿ ಗಾಳಿ ಮಳೆಗೆ ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಜ್ಜೊನಿ ಎಂಬಲ್ಲಿ ರಸ್ತೆಗೆ ಮರ ಬಿದ್ದು ಕೆಲ ಹೊತ್ತು ಸಂಚಾರಕ್ಕೆ ಅಡಚಣೆಯಾದ ಘಟನೆ ನಡೆದಿದೆ.

ಕಲ್ಲಡ್ಕ – ವಿಟ್ಲ ರಸ್ತೆ ಯ ವೀರಕಂಭ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೆಲಿಂಜ ಸಮೀಪದ ಕೋಡಪದವು ಕ್ರಾಸ್ ನ ಮಜ್ಜೊನಿ ಎಂಬಲ್ಲಿ ಅರಣ್ಯ ಇಲಾಖೆಗೆ ಸೇರಿದ ಬೃಹತ್ ಗಾತ್ರದ ಮರವೊಂದು ಸಂಜೆ ಸುಮಾರು 4.30 ರ ವೇಳೆ ಗುಡ್ಡದ ಮೇಲಿಂದ ಬುಡಸಮೇತ ರಸ್ತೆಗೆ ಬಿದ್ದು ಕೆಲವು ಹೊತ್ತು ಸಂಚಾರಕ್ಕೆ ತೊಂದರೆಯಾಯಿತು.

ರಸ್ತೆಯ ಬದಿಯಲ್ಲಿ ಇದ್ದ ವಿದ್ಯುತ್ ತಂತಿಗೆ ಮರ ಬಿದ್ದ ಪರಿಣಾಮವಾಗಿ ಎರಡು ವಿದ್ಯುತ್ ಕಂಬಗಳು ಧರೆಗುರುಳಿದು ಬಿದ್ದು ಲಕ್ಷಾಂತರ ರೂ ನಷ್ಟ ಸಂಭವಿಸಿದೆ.

ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಬಗ್ಗೆ ಘಟನೆ ತಿಳಿದು ಕೆಲಿಂಜ‌ ನಿವಾಸಿ ಚಂದ್ರಶೇಖರ್ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳ ತಂಡ ಹಾಗೂ ಸ್ಥಳೀಯರ ಸಹಕಾರದಿಂದ ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.

ವೀರಕಂಭ ಗ್ರಾ.ಪಂ.ಅಧ್ಯಕ್ಷ ದಿನೇಶ್ ಪೂಜಾರಿ, ಸದಸ್ಯ ಜಯಪ್ರಸಾದ್ ಅವರು ಸ್ಥಳದಲ್ಲಿ ನಿಂತು ತೆರವು ಕಾರ್ಯಕ್ಕೆ ಸಹಕಾರ ನೀಡಿದರು.

ತಾಲೂಕಿನ ವಿವಿಧೆಡೆ ಹಾನಿ
ಬಂಟ್ವಾಳ ತಾಲೂಕಿನ ಹಲವಾರು ಕಡೆಗಳಲ್ಲಿ ಮಳೆಹಾನಿ ಉಂಟಾಗಿದ್ದು, ಅಮ್ಮುಂಜೆ ಗ್ರಾಮದಲ್ಲೂ ಮರಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದೆ. ಬಾಳ್ತಿಲ ಗ್ರಾಮದ ಬಸ್ತಿ ಬಳಿ ನಿವಾಸಿ ಸೋಮಪ್ಪ ನಾಯ್ಕ ಅವರ ವಾಸ್ತವ್ಯದ ಮನೆಗೆ ಮರ ಮತ್ತು ಮಣ್ಣು ಜರಿದು ಬಿದ್ದು ಹಾನಿಯಾಗಿರುತ್ತದೆ. ನೆಟ್ಟ ಮುಡ್ನೂರು ಗ್ರಾಮದ ಭಗವಂತಕೋಡಿ ನಿವಾಸಿ ಅಬ್ದುಲ್ ಮಜೀದ್ ಬಿನ್ ಅಬೂಬಕ್ಕರ್ ಅವರ ಮನೆಯ ಹಿಂಭಾಗದ ಗುಡ್ಡ ಕುಸಿದಿರುತ್ತದೆ.

ಅಮ್ಮಾಡಿ ಗ್ರಾಮದ ಕೆಂಪುಗುಡ್ಡೆ ನಿವಾಸಿ ಮಂಜುನಾಥ ಅವರ ಮನೆಯ ಹಿಂಬದಿ ಕುಸಿದಿರುತ್ತದೆ. ಹೊನ್ನಪ್ಪ ಬಿನ್ ಕೋಟ್ಯಪ್ಪ ಅವರ ಮನೆಯ ಕಂಪೌಂಡ್ ಕುಸಿದು ಬಿದ್ದು ಹಾನಿ ಸಂಭವಿಸಿರುತ್ತದೆ. ವಿಟ್ಲ ಕಸ್ಬಾ ಗ್ರಾಮದ ಪೂವಪ್ಪ ಮೂಲ್ಯ ಎಂಬವರ ಮನೆಗೆ ಹಾನಿಯಾಗಿರುತ್ತದೆ ಎಂದು ತಾಲೂಕು ಕಛೇರಿ ಪ್ರಕಟಣೆ ತಿಳಿಸಿದೆ.

Gayathri SG

Recent Posts

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

13 mins ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

27 mins ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

40 mins ago

ಜೂನಿಯರ್ ಎನ್​ಟಿಆರ್ ಜನ್ಮದಿನ : ಸ್ಟಾರ್ ಹೀರೋಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ

ಜೂನಿಯರ್ ಎನ್​ಟಿಆರ್ ಅವರಿಗೆ ಇಂದು ಹುಟ್ಟುಹಬ್ಬ ಸಂಭ್ರಮ.ಈ ವಿಶೇಷ ದಿನದಂದು ಸೆಲೆಬ್ರಿಟಿಗಳು, ಕುಟುಂಬದವರು, ಅಭಿಮಾನಿಗಳು ನಟನಿಗೆ ಶುಭಾಶಯ ಬರುತ್ತಿದೆ. ಜೂನಿಯರ್…

57 mins ago

ಮಲ್ಲಮ್ಮ ಜಯಂತಿಗೆ ಅಗೌರವ : ರೆಡ್ಡಿ ಸಮಾಜ ಪದಾಧಿಕಾರಿಗಳ ಪ್ರತಿಭಟನೆ

ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…

1 hour ago

ಮಳೆಯಿಂದ​ ಪಂದ್ಯ ರದ್ದು : ರಾಯಲ್ಸ್​ ವಿರುದ್ಧ ರಾಜಸ್ಥಾನ್​ ಕಣಕ್ಕೆ

17ನೇ ಆವೃತ್ತಿಯ ಐಪಿಎಲ್​ನ ಕೊನೆಯ ಲೀಗ್​ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್​ ರಾಯಲ್ಸ್​ ಮತ್ತು ಕೋಲ್ಕತ್ತಾ ನೈಟ್​ ರೈಡರ್ಸ್ತಂಡಗಳು ಈ…

2 hours ago