ಬಂಟ್ವಾಳ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ವಾಮದಪದವಿನಲ್ಲಿ ನಡೆದಿದೆ.
ವಾಮದಪದವು ಸಮೀಪದ ಕುಕ್ಕಿಪ್ಪಾಡಿ ಎಂಬಲ್ಲಿನ ಗಂಗಾಧರ ಎಂಬವರ ಪತ್ನಿ ಜಯಂತಿ (36) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.ಮದುವೆ ಆಗಿ ಸುಮಾರು ಆರು ವರ್ಷಗಳಾಗಿದ್ದು ಗಂಡ ಹೆಂಡತಿ ಅನ್ಯೋನ್ಯತೆಯಿದ್ದರು.
ಆದರೆ ಆರು ವರ್ಷಗಳಾದರೂ ಮಕ್ಕಳಾಗಿಲ್ಲ ಎಂಬ ಕೊರಗಿನಿಂದ ಇದ್ದ ಇವರು ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ. ಪುಂಜಾಲಕಟ್ಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.