News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ಜೀವ ವಿಮಾ ಪ್ರತಿನಿಧಿಗಳ ಸಂಘಟನೆ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಭಿತ್ತಿಪತ್ರ ಬಿಡುಗಡೆ

Bitti
Photo Credit : By Author

ಬಂಟ್ವಾಳ: ಕಳೆದ 66 ವರ್ಷಗಳಲ್ಲಿ ಪ್ರತಿನಿಧಿಗಳ ಪರಿಶ್ರಮದಿಂದ ದೇಶದಲ್ಲೇ ಅತೀ ದೊಡ್ಡ ವಿಮಾ ಸಂಸ್ಥೆಯಾಗಿ ಬೆಳೆದು ನಿಂತಿರುವ ಭಾರತೀಯ ಜೀವ ವಿಮಾ ನಿಗಮದಲ್ಲಿ ಐ ಆರ್ ಡಿ ಎ ರೂಪಿಸುತ್ತಿರುವ ಕೆಲವೊಂದು ಅನಗತ್ಯ ಪ್ರಸ್ತಾವನೆ ಮತ್ತು ಮಾರಕ ಯೋಜನೆಗಳು ಸಂಸ್ಥೆ ಮತ್ತು ಪ್ರತಿನಿಧಿಗಳ ಅಸ್ತಿತ್ವಕ್ಕೆ ಧಕ್ಕೆ ತರುತ್ತಿದೆ. ಇದಕ್ಕಾಗಿ ಡಿ.9ರಂದು ಹೈದರಾಬಾದ್ ನಲ್ಲಿ ಐ ಆರ್ ಡಿ ಎ ವಿರುದ್ಧ ಲಕ್ಷಾಂತರ ಮಂದಿ ಪ್ರತಿನಿಧಿಗಳು ವಿವಿಧ ರಾಜ್ಯಗಳಿಂದ ಬಂದು ಧರಣಿ ನಡೆಸಲು ಸಿದ್ಧತೆ ನಡೆಸಲಾಗಿದೆ ಎಂದು ಲಿಕಾಯ್ ಸಂಘದ ದಕ್ಷಿಣ ಮಧ್ಯೆ ವಲಯ ಅಧ್ಯಕ್ಷ ಎಲ್. ಮಂಜುನಾಥ್ ಹೇಳಿದ್ದಾರೆ.

ಇಲ್ಲಿನ ಬಿ.ಸಿ.ರೋಡು ಗಾಣದಪಡ್ಪು ಸಭಾಂಗಣದಲ್ಲಿ ಅಖಿಲ ಭಾರತ ಜೀವ ವಿಮಾ ಪ್ರತಿನಿಧಿಗಳ ಸಂಘಟನೆ ವತಿಯಿಂದ ಸೋಮವಾರ ನಡೆದ ‘ ಐ ಆರ್ ಡಿ ಎ ಪ್ರಸ್ತಾವನೆ ಮತ್ತು ಪರಿಣಾಮ’ ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಂಘದ ಉಡುಪಿ ವಿಭಾಗೀಯ ಅಧ್ಯಕ್ಷ ಎಂ.ಎಸ್.ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ರಾಜ್ಯಗಳಿಂದಲೂ ಪ್ರತಿಭಟನೆಗೆ ತೆರಳಲು ಪ್ರತಿನಿಧಿಗಳು ಮುಂದಾಗಿದ್ದಾರೆ ಎಂದರು.

ರಾಜ್ಯ ಸಮಿತಿ ಅಧ್ಯಕ್ಷ ಎ.ಎಸ್.ಲೋಕೇಶ ಶೆಟ್ಟಿ ಮಾತನಾಡಿ, ಈಗಾಗಲೇ ಆಯಾಯ ಜಿಲ್ಲೆಯ ಸಂಸದರಿಗೆ ಈ ಬಗ್ಗೆ ಮನವಿ ಸಲ್ಲಿಸಲಾಗುವುದು ಎಂದರು.

ರಾಜ್ಯ ಉಪಾಧ್ಯಕ್ಷೆ ರೇಖಾ ಕೋಟೆಕಾರ್, ರಾಜ್ಯ ಜೊತೆ ಕಾರ್ಯದರ್ಶಿ ವಲಿ ಮೊಯ್ದಿನ್, ಉಡುಪಿ ವಿಭಾಗ ಪ್ರಧಾನ ಕಾರ್ಯದರ್ಶಿ ದಯಾನಂದ ಶೆಟ್ಟಿ ಕೆ.ಪಿ., ಬಂಟ್ವಾಳ ಘಟಕ ಅಧ್ಯಕ್ಷ ಪ್ರಶಾಂತ ಕೋಟ್ಯಾನ್ ಮತ್ತಿತರರು ಇದ್ದರು.

ಇದೇ ವೇಳೆ ಹೈದರಾಬಾದ್ ಧರಣಿ ಬಗ್ಗೆ ಭಿತ್ತಿಪತ್ರ ಬಿಡುಗಡೆಗೊಳಿಸಲಾಯಿತು. ಉಡುಪಿ ವಿಭಾಗ ಕಾರ್ಯಾಧ್ಯಕ್ಷ ಪ್ರಕಾಶ್ ರೈ ಸಾರಕೆರೆ ಸ್ವಾಗತಿಸಿ, ಕೋಶಾಧಿಕಾರಿ ಲಕ್ಷö್ಮಣ ಸಾಲ್ಯಾನ್ ವಂದಿಸಿದರು. ಪ್ರತಿನಿಧಿ ನವೀನ್ ಕೊಡ್ಮಾಣ್ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು