News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ: ಫ್ಯಾನ್ಸಿ ಅಂಗಡಿಯೊಂದರ ಬಳಿ ಅಂಗಡಿ ಮಾಲಕರ ಮೇಲೆ ಹಲ್ಲೆ!

Shivamogga: Clash between two youth groups
Photo Credit : News Kannada

ಬಂಟ್ವಾಳ: ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಪ್ರಯುಕ್ತ ಹಾಕಲಾಗಿದ್ದ ಫ್ಯಾನ್ಸಿ ಅಂಗಡಿಯೊಂದರ ಬಳಿ ಬಂದ ತಂಡವೊಂದು ಅಂಗಡಿ ಮಾಲಕರಿಗೆ ಹಲ್ಲೆ ನಡೆಸಿ, ಅವರ ಪತ್ನಿಯ ಮೈಗೆ ಕೈಹಾಕಿ ಮಾನಭಂಗಕ್ಕೆ ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ವಿಟ್ಲ ಠಾಣಾ ಪೊಲೀಸರು ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಟ್ಲ ಪಡ್ನೂರು ಗ್ರಾಮದ ಕೋಡಪದವು ದಿವಾನ ನಿವಾಸಿ ಚಂದಪ್ಪ ಮೂಲ್ಯರವರ ಪುತ್ರ ಪುತ್ರ ಗಣೇಶ್ ಯಾನೇ ಕಡಂಬು ಗಣೇಶ್ ಬಂಧಿತ ಆರೋಪಿ.

ಬಂಟ್ವಾಳ ತಾಲೂಕು ನೇರ್ಲಾಜೆ ನಿವಾಸಿ ಸುರೇಶ್ ದಾಸ್ ರವರು ದೂರದಾರರಾಗಿದ್ದಾರೆ. ನಾನು ಬಂಟ್ವಾಳ ತಾಲೂಕು ವಿಟ್ಲ ಕಸಬ ಗ್ರಾಮದ ಶ್ರೀ ಪಂಚಲಿಗೇಶ್ವರ ದೇವಸ್ಥಾನದ ಪಕ್ಕದಲ್ಲಿ ಜಾತ್ರೆಯ ಪ್ರಯುಕ್ತ ದೇವಸ್ಥಾನದ ಅನುಮತಿಯಂತೆ ಫ್ಯಾನ್ಸಿ ಮಳಿಗೆ ತೆರೆದು ವ್ಯವಹಾರ ನಡೆಸುತ್ತಿದ್ದು, ಜ.೧೯ರಂದು ರಾತ್ರಿ ೧೨.೩೦ರ ಸುಮಾರಿಗೆ ವ್ಯಾಪಾರ ಮುಗಿಸಿ ಮಳಿಗೆಯನ್ನು ಮುಚ್ಚುತ್ತಿದ್ದ ವೇಳೆ ಗಣೇಶ್‌ ಕಡಂಬು, ಮಂಜುನಾಥ ಹಾಗೂ ಇತರ ನಾಲ್ವರು ಮಳಿಗೆ ಬಳಿಗೆ ಬಂದು ಮಳಿಗೆ ಮುಚ್ಚುತ್ತಿರುವುದನ್ನು ಆಕ್ಷೇಪಿಸಿ ಅವಾಚ್ಯ ಶಬ್ದಗಳಿಂದ ನಿಂಧಿಸಿ ಹಲ್ಲೆ ನಡೆಸಿದ್ದಾರೆ.

ಇದನ್ನು ಕಂಡ ನನ್ನ ಪತ್ನಿ‌ ಓಡಿ ಜಗಳ ಬಿಡಿಸಲೆತ್ನಿಸಿದಾಗ ಆಕೆಗೂ ಹಲ್ಲೆ ನಡೆಸಿ ಆಕೆಯ ಮಾನಭಂಗಕ್ಕೆ ಯತ್ನಿಸಿದ್ದಾರೆ. ಈ ವೇಳೆ ಜನಸೇರುತ್ತಿದ್ದಂತೆ ನನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಜೀವಬೆದರಿಕೆ ಒಡ್ಡಿ ತಂಡವು ಅಲ್ಲಿಂದ ಪರಾರಿಯಾಗಿದೆ ಎಂದು ಆರೋಪಿಸಿ ಸುರೇಶ್ ದಾಸ್ ರವರು ವಿಟ್ಲ ಠಾಣಾ ಪೊಲೀಸರಿಗೆ ದೂರು ನೀಡಿದ್ದರು.

ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ವಿಟ್ಲ ಠಾಣಾ ಪೊಲೀಸರು ಆರು ಮಂದಿ ಆರೋಪಿಗಳ ಪೈಕಿ ಓರ್ವನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಪ್ರಮುಖ ಆರೋಪಿಗಳಿಬ್ಬರು ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಂದ ಬಂದಿಸಲ್ಪಟ್ಟು ಜೈಲಿನಲ್ಲಿದ್ದು, ಜಾಮೀನಿನ ಮೇಲೆ ಹೊರಬಂದಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು