News Karnataka Kannada
Friday, May 03 2024
ಮಂಗಳೂರು

ಬಂಟ್ವಾಳ: ಉದ್ಯೋಗ ನಿಮಿತ್ತ ಕತಾರ್ ಗೆ ತೆರಳಿದ್ದ ಯುವಕ ಕಾರು ಅಪಘಾತದಲ್ಲಿ ದಾರುಣ ಸಾವು

Bantwal: A youth, who was on his way to Qatar for work, died in a car accident.
Photo Credit : By Author

ಬಂಟ್ವಾಳ: ಕತಾರ್ ದೇಶದಲ್ಲಿ ಉದ್ಯೋಗ ನಿಮಿತ್ತ ತೆರಳಿದ್ದ ಸಜಿಪ ಸಮೀಪದ ಕಂಚಿನಡ್ಕಪದವು- ಚಟ್ಟೆಕ್ಕಲ್ ನಿವಾಸಿ ಅಬ್ದುಲ್ ರಹಿಮಾನ್- ಹಲೀಮಮ್ಮ ದಂಪತಿಯ ಹಿರಿಪುತ್ರ, ಅವಿವಾಹಿತ ಯುವಕ ಫಹದ್ (24) ಮಂಗಳವಾರ (ಡಿ 6) ರಾತ್ರಿ ನಡೆದ ಕಾರು ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟಿದ್ದಾರೆ.

ಫಹದ್ ತನ್ನ ಕಾರಿನಲ್ಲಿ ಮಾಲಕ ಪುತ್ರನನ್ನು ರೆಸಾಟ್‌ರ್ಗೆ ಬಿಟ್ಟು ವಾಪಾಸು ಬರುತ್ತಿದ್ದ ವೇಳೆ ರಸ್ತೆಯಲ್ಲಿ ಕಾರು ಉರುಳಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದಾನೆ. ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಫಹದ್ ಕಳೆದ ಐದು ತಿಂಗಳ ಹಿಂದೆಯಷ್ಟೆ ಡ್ರೈವರ್ ವೀಸಾದಲ್ಲಿ ಕತಾರಿಗೆ ತೆರಳಿದ್ದ.

ಈ ಹಿಂದೆ ಒಂದು ವರ್ಷ ಸೌದಿ ಅರೇಬಿಯಾದಲ್ಲಿ ಡ್ರೈವರ್ ಆಗಿ ಕೆಲಸ ನಿರ್ವಹಿಸಿದ್ದ ಫಹದ್ ಕೊರೋನಾ ಕಾರಣದಿಂದ ಊರಿಗೆ ಬಂದು ಒಂದು ವರ್ಷ ಕಾಲ ಊರಿನಲ್ಲೇ ಚಾಲಕ ವೃತ್ತಿ ಮಾಡುತ್ತಿದ್ದ. ಬಳಿಕ ಕಳೆದ ಐದು ತಿಂಗಳ ಹಿಂದೆ ಕತಾರಿಗೆ ತೆರಳಿದ್ದ. ಮಂಗಳವಾರ ರಾತ್ರಿ ಅಪಘಾತ ನಡೆಯುವ ಸ್ವಲ್ಪ ಮುಂಚೆಯಷ್ಟೆ ದೂರವಾಣಿ ಕರೆ ಮಾಡಿ ಮನೆ ಮಂದಿ ಜೊತೆ ಮಾತನಾಡಿ ಸುಖ-ದುಃಖ ಹಂಚಿಕೊಂಡಿದ್ದ. ಆ ಬಳಿಕ ಅಪಘಾತದ ಸುದ್ದಿ ಕೇಳಿ ಮನೆ ಮಂದಿ ತೀವ್ರ ಆಘಾತಕ್ಕೊಳಗಾಗಿದ್ದಾರೆ. ಅಬ್ದುಲ್ ರಹಿಮಾನ್ ಅವರ ಇಬ್ಬರು ಪುತ್ರರ ಪೈಕಿ ಫಹದ್ ಹಿರಿಯವನಾಗಿದ್ದು, ಕಿರಿಯ ಪುತ್ರ ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.

ಫಹದ್ ಅವರ ತಾಯಿ ಹಲೀಮಮ್ಮ ಮೂಲತಃ ಪಾಣೆಮಂಗಳೂರು ಸಮೀಪದ ಬಂಗ್ಲೆಗುಡ್ಡೆ ನಿವಾಸಿಯಾಗಿದ್ದರೆ, ತಂದೆ ಅಬ್ದುಲ್ ರಹಿಮಾನ್ ಮೂಲತಃ ಸಜಿಪ ನಿವಾಸಿಯಾಗಿದ್ದು, ಪ್ರಸ್ತುತ ಕಂಚಿನಡ್ಕಪದವಿನ ಚಟ್ಟೆಕ್ಕಲ್ಲಿನಲ್ಲಿ ವಾಸ್ತವ್ಯ ಹೊಂದಿರುತ್ತಾರೆ.

ಮೃತ ಫಹದ್ ಮೃತದೇಹವನ್ನು ಊರಿಗೆ ತರುವ ನಿಟ್ಟಿನಲ್ಲಿ ಎಲ್ಲಾ ಕೆಲಸ-ಕಾರ್ಯಗಳು ನಡೆಯುತ್ತಿದ್ದು, ಇಂದು ರಾತ್ರಿ ಅಥವಾ ಗುರುವಾರ ಊರಿಗೆ ತಲುಪುವ ನಿರೀಕ್ಷೆ ಇದೆ. ಬಳಿಕ ಸಜಿಪ ಕೇಂದ್ರ ಜುಮಾ ಮಸೀದಿಯ ದಫನ ಭೂಮಿಯಲ್ಲಿ ಅಂತ್ಯ ಕ್ರಿಯೆ ನಡೆಸಲಾಗುವುದು ಎಂದು ಕುಟುಂಬಿಕರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು