ಬಂಟ್ವಾಳ : ಬಾರಿ ಮಳೆಯ ಪ್ರಕೃತಿ ವಿಕೋಪದಿಂದ ಬಂಟ್ವಾಳ ತಾಲೂಕಿನ ಅರಳ, ಕಾವಳಪಡೂರು, ಕಾಡಬೆಟ್ಟು, ಮೂಡನಡುಗೋಡು, ಕಾವಳಮೂಡೂರು, ಪಂಜಿಕಲ್ಲು ಗ್ರಾಮಗಳ ಮನೆಗಳಿಗೆ ಗುಡ್ಡ ಕುಸಿದು ಹಾನಿಗೊಂಡಿದೆ.
ಹಾಗೂ ಪುರಸಭಾ ವ್ಯಾಪ್ತಿಯ ಗೂಡಿನಬಳಿ ಟಿಪ್ಪು ರಸ್ತೆ ಕುಸಿದು ಹಾನಿಗೊಂಡ ಸ್ಥಳಕ್ಕೆ ಮಾಜಿ ಸಚಿವರಾದ ಬಿ ರಮಾನಾಥ ರೈ ಯವರು ಭೇಟಿ ನೀಡಿ ಸೂಕ್ತ ಪರಿಹಾರ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಕರೆಯ ಮೂಲಕ ತಿಳಿಸಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಜಿಲ್ಲಾ ಪಂಚಾಯತ್ ಸದಸ್ಯರಾದ ಪದ್ಮಶೇಖರ್ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಚಂದ್ರಶೇಖರ್ ಕರ್ಣ, ಮಾಣಿಕ್ಯ ರಾಜ್ ಜೈನ್,ಜನಾರ್ದನ್ ಸಪಲ್ಯ ಪ್ರಮುಖರು ಉಪಸ್ಥಿತರಿದ್ದರು.