ಬಂಟ್ವಾಳ: ಬಂಟ್ವಾಳದಲ್ಲಿ ಮತ್ತೆ ಕಾಂಗ್ರೆಸ್ ಮತಾಂಧ ಶಕ್ತಿಗಳ ಜೊತೆಯಾಗಿ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಮುಂದಾಗಿದೆ, ಕ್ಷೇತ್ರದ ಜನತೆ ಎಚ್ಚರಿಕೆಯಿಂದ ಮತದಾನ ಮಾಡಬೇಕಾದ ಅನಿವಾರ್ಯತೆ ಇದ್ದು,ಬಿಜೆಪಿಯನ್ನು ಗೆಲ್ಲಿಸಿ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ತಿಳಿಸಿದರು.
ಅವರು ಸಂಗಬೆಟ್ಟು ಗ್ರಾಮದ ಮೇಲ್ಗುಡ್ಡೆ ಎಂಬಲ್ಲಿ ಎಸ್.ಸಿ.ಎಸ್ಟಿ ಕಾಲೋನಿಗೆ ಬೇಟಿ ನೀಡಿ ಮತಯಾಚನೆ ನಡೆಸಿದರು.
ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಜನ ಮತ್ತೆ ಬಿಜೆಪಿಗೆ ಮತ ನೀಡುತ್ತಾರೆ ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ನಿಮ್ಮ ಧ್ವನಿಯಾಗಿ ವಿಧಾನಸಭೆಯಲ್ಲಿ ಮಾತನಾಡಲು ನನಗೆ ಆಶೀರ್ವಾದ ಮಾಡಿ ಎಂದು ಅವರು ಮನವಿ ಮಾಡಿದರು.
ತಾ.ಪಂ.ಮಾಜಿ ಸದಸ್ಯ ಪ್ರಭಾಕರ ಪ್ರಭು ಮಾತನಾಡಿ, ಶಾಸಕ ರಾಜೇಶ್ ನಾಯ್ಕ್ ಅವರು, ಸಂಗಬೆಟ್ಟು ಗ್ರಾ.ಪಂ.ವ್ಯಾಪ್ತಿಯಲ್ಲಿ ಹಿಂದೆಂದೂ ಕಂಡಿರದ ಅದ್ಬುತ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದಾರೆ.
ಮುಂದಿನ ದಿನಗಳಲ್ಲಿ ಬಂಟ್ವಾಳ ಕ್ಷೇತ್ರದ ಅಭಿವೃದ್ಧಿ ಜೊತೆಗೆ ಸಂಗಬೆಟ್ಟು ಗ್ರಾ.ಪ.ನ್ನು ಜಿಲ್ಲೆಯಲ್ಲಿ ಗುರುತಿಸಲ್ಪಡುವ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಶಾಸಕರ ಮೂಲಕ ಮಾಡಿಸುವ ಭರವಸೆ ನೀಡಿದರು.
ಅಭಿವೃದ್ಧಿ ಜೊತೆಗೆ ಹಿಂದೂ ಸಮಾಜಕ್ಕೆ ಶಾಂತಿ,ನೆಮ್ಮದಿಯ ಬದುಕಿಗಾಗಿ,ರಾಷ್ಟ್ರೀಯತೆಯನ್ನು ಉಳಿಸಿಕೊಳ್ಳಲು ಮತ್ತೊಮ್ಮೆ ಬಂಟ್ವಾಳದಲ್ಲಿ ರಾಜೇಶ್ ನಾಯ್ಕ್ ಅವರನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ಪ್ರಮುಖರಾದ ರತ್ನಕುಮಾರ್ ಚೌಟ,ದೀಪಕ್ ಶೆಟ್ಟಿಗಾರ್,ಉಮೇಶ್ ಗೌಡ,ದೇವರಾಜ ಸಾಲಿಯಾನ್, ಸುನಿಲ್ ಶೆಟ್ಟಿಗಾರ್,ಉದಯ, ಸುರೇಶ್ ಕುಲಾಲ್, ಶಕುಂತಲಾ, ಶಾಂತ, ಕಿಶೋರ್ ಕುಮಾರ್, ಗಣೇಶ್ ಕೋಟ್ಯಾನ್ ಮೊದಲಾದವರು ಉಪಸ್ಥಿತರಿದ್ದರು.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಐಪಿಎಲ್ ಪಂದ್ಯದಲ್ಲಿ ವಿರಾಟ್…
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…