News Karnataka Kannada
Saturday, May 04 2024
ಮಂಗಳೂರು

ಬಂಟ್ವಾಳ: ಬಿಜೆಪಿ ಎಸ್.ಟಿ.ಮೋರ್ಚಾದ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

Bantwal: Bjp ST Morcha organises free health check-up camp
Photo Credit : By Author

ಬಂಟ್ವಾಳ: ರಾಜ್ಯದ ಪರಿಶಿಷ್ಟರ ಜೀವನ ಮಟ್ಟ ಸುಧಾರಣೆಯ ದೃಷ್ಟಿಯಿಂದ ರಾಜ್ಯ ಸರಕಾರವು ಎಸ್.ಟಿ.ಸಮುದಾಯ ಮೀಸಲಾತಿಯನ್ನು ೩ರಿಂದ ೭ ಶೇ.ಕ್ಕೆ ಹೆಚ್ಚಿಸುವ ಮೂಲಕ ಸಮುದಾಯಕ್ಕೆ ದೊಡ್ಡ ಮಟ್ಟದ ಕೊಡುಗೆಯನ್ನು ನೀಡಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.

ಅವರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಭಾಂಗಣದಲ್ಲಿ ಬಂಟ್ವಾಳ ಬಿಜೆಪಿ ಎಸ್.ಟಿ.ಮೋರ್ಚಾದ ವತಿಯಿಂದ ಮಹರ್ಷಿ ವಾಲ್ಮೀಕಿ ಜಯಂತಿಯ ಅಂಗವಾಗಿ ದೇರಳಕಟ್ಟೆ ಯೇನಪೋಯ ವೈದ್ಯಕೀಯ ವಿವಿಯ ಸಹಯೋಗದೊಂದಿಗೆ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಮೀಸಲಾತಿ ಹೆಚ್ಚಳದ ದೃಷ್ಟಿಯಿಂದ ಪಕ್ಷದ ಕಾರ್ಯಕಾರಿಣಿಯಲ್ಲೂ ಪ್ರಸ್ತಾಪಗೊಂಡಿದ್ದು, ವಾಲ್ಮೀಕಿ ಜಯಂತಿಯ ಶುಭ ಸಂದರ್ಭದಲ್ಲಿ ಕ್ಯಾಬಿನೆಟ್ ನ ಒಪ್ಪಿಗೆಯನ್ನು ಪಡೆದು ಮೀಸಲಾತಿ ಹೆಚ್ಚಳದ ಮಹತ್ವದ ತೀರ್ಮಾನ ಪ್ರಕಟಗೊಂಡಿದೆ. ಪರಿಶಿಷ್ಟರ ಆರೋಗ್ಯದ ದೃಷ್ಟಿಯಿಂದ ಸರಕಾರ ವಿಶೇಷ ಗಮನಹರಿಸಿ ಅದರ ಜತೆಗೆ ಇತರ ಸಮುದಾಯದವರ ಆರೋಗ್ಯದ ದೃಷ್ಟಿಯಿಂದ ಖಾಸಗಿ ಕ್ಷೇತ್ರದಲ್ಲಿ ದುಬಾರಿಯಾಗುವ ಆರೋಗ್ಯ ತಪಾಸಣೆಗಳನ್ನು ಯೆನಪೋಯ ವಿವಿಯ ಸಹಯೋಗದೊಂದಿಗೆ ತಪಾಸಣೆಯ ಕಾರ್ಯ ಮಾಡುತ್ತಿದ್ದು, ಚಿಕಿತ್ಸೆಗೂ ನೆರವು ನಿಡುತ್ತಿದೆ ಎಂದರು.

ಎಸ್‌.ಟಿ.ಮೋರ್ಚಾ ಅಧ್ಯಕ್ಷ ರಾಮ ನಾಯ್ಕ್ ಕೆ. ಅಧ್ಯಕ್ಷತೆ ವಹಿಸಿದ್ದರು. ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಡೊಂಬಯ ಅರಳ ಅವರು ಮಹರ್ಷಿ ವಾಲ್ಮೀಕಿ ಅವರ ಕುರಿತು ಉಪನ್ಯಾಸ ನೀಡಿದರು. ವೇದಿಕೆಯಲ್ಲಿ ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಮೋರ್ಚಾದ ಪ್ರಭಾರಿ ರಮನಾಥ ರಾಯಿ, ಬಾಳ್ತಿಲ ಗ್ರಾ.ಪಂ.ಅಧ್ಯಕ್ಷೆ ಹಿರಣ್ಮಯಿ, ಬರಿಮಾರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ದೇರಳಕಟ್ಟೆ ಯೆನಪೋಯ ಆಸ್ಪತ್ರೆಯ ವೈದ್ಯೆ ಡಾ.ಅಶ್ವಿನಿ ಶೆಟ್ಟಿ ಉಪಸ್ಥಿತರಿದ್ದರು.

ಬರಿಮಾರು ಗ್ರಾ.ಪಂ.ಸದಸ್ಯೆ ಪುಷ್ಲಲತಾ ಸ್ವಾಗತಿಸಿದರು. ಬಾಳ್ತಿಲ ಗ್ರಾ.ಪಂ.ಸದಸ್ಯ ವಿಠಲ್ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು