ಬಂಟ್ವಾಳ: ಎಸ್ ಡಿ ಪಿ ಐ ಪಕ್ಷವು ಹಮ್ಮಿಕೊಂಡಿರುವ ‘ರಕ್ತ ಕೊಟ್ಟು ಬಾಂಧವ್ಯ ಕಟ್ಟು’ ರಕ್ತದಾನ ಮಾಸಾಚರಣೆಯ ಭಾಗವಾಗಿ ಎಸ್ ಡಿ ಪಿ ಐ ಮಂಚಿ ಗ್ರಾಮ ಸಮಿತಿ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಕುಕ್ಕಾಜೆ ಪ್ರಾಥಮಿಕ ಶಾಲೆಯಲ್ಲಿ ಬೃಹತ್ ರಕ್ತದಾನ ಶಿಬಿರವು ನಡೆಯಿತು.
ಕಾರ್ಯಕ್ರಮ ಸಭಾಧ್ಯಕ್ಷತೆಯನ್ನು ಎಸ್ ಡಿ ಪಿ ಐ ಮಂಚಿ ಗ್ರಾಮ ಸಮಿತಿ ಅಧ್ಯಕ್ಷ ಕಬೀರ್ ಮಂಚಿ ವಹಿಸಿದ್ದರು. ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಕಾರ್ಯಕ್ರಮವನ್ನು ಉದ್ಘಾಟನೆಗೈದು ಸಂದೇಶ ಮಾತನ್ನಾಡಿದರು.
ಸಾಲೆತ್ತೂರು ನಿತ್ಯಧಾರ್ ಚರ್ಚ್ ಧರ್ಮಗುರು ಹೆನ್ರಿ ಡಿ ಸೋಜ , ಬಂಟ್ವಾಳ ವಿಧಾನಸಭಾ ಎಸ್ ಡಿ ಪಿ ಐ ಅಧ್ಯಕ್ಷ ಮೂನಿಷ್ ಅಲಿ, ಮೆಲ್ಕಾರ್ ವುಮನ್ಸ್ ಕಾಲೇಜ್ ನ ಸಹಪ್ರಾಧ್ಯಾಪಕ ಎಂ.ಡಿ.ಮಂಚಿ ಹಾಗೂ ಎಸ್ ಡಿ ಪಿ ಐ ಮಂಗಳೂರು ವಿಧಾನಸಭಾ ಸಂಘಟನಾ ಕಾರ್ಯದರ್ಶಿ ಅಶ್ರಫ್ ಮಂಚಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಎಸ್ ಡಿ ಪಿ ಐ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾರ್ಯದರ್ಶಿ ಕಲಂದರ್ ಪರ್ತಿಪಾಡಿ, ಮಾಕ್ಸಿಂ ಫೆರ್ನಾಂಡಿಸ್, ಎಸ್ ಡಿ ಪಿ ಐ ಕೊಳ್ನಾಡು ಬ್ಲಾಕ್ ಸಮಿತಿ ಅಧ್ಯಕ್ಷ ಬಶೀರ್ ಕೊಳ್ನಾಡು, ನವಾಜ್ ಕೋಡಿಬೈಲು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಬಂಟ್ವಾಳ ಕ್ಷೇತ್ರದ ಎಸ್ ಡಿ ಪಿ ಐ ಅಭ್ಯರ್ಥಿ ಇಲ್ಯಾಸ್ ಮುಹಮ್ಮದ್ ತುಂಬೆ ಅವರಿಗೆ ಅಭಿನಂದಿಸಿ, ಸ್ಮರಣಿಕೆ ನೀಡಿ ಗೌರವಿಸಲಾಯಿತು.
ರಕ್ತದಾನ ಶಿಬಿರದಲ್ಲಿ ಸುಮಾರು 68 ಯುನಿಟ್ ರಕ್ತ ಸಂಗ್ರಹಿಸಲಾಯಿತು. ಫಾರೂಕ್ ಮಂಚಿ ಕಾರ್ಯಕ್ರಮವನ್ನು ಸ್ವಾಗತಿಸಿ ನಿರೂಪಿಸಿದರು.