ಬಂಟ್ವಾಳ: ಇಲ್ಲಿನ ತಾಲೂಕು ಕಚೇರಿಯಲ್ಲಿ ಉಪತಹಶೀಲ್ದಾರರಾಗಿದ್ದ ಶ್ರೀಧರ್ ಪುತ್ತೂರು ಇವರು ತನ್ನ ಸೇವಾ ಅವಧಿಯಲ್ಲಿ ಕಳೆದ ಕೋವಿಡ್ ಸಂಧರ್ಭದಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಇದೀಗ ಸರ್ಕಾರದ ನಿಯಮದಂತೆ ಸರಕಾರದಿಂದ ಮಂಜೂರಾದ ಪರಿಹಾರ ಧನ ರೂ. 30,00,000 (ರೂ. ಮೂವತ್ತು ಲಕ್ಷ) ಚೆಕ್ಕನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಈ ದಿನ ಪತ್ನಿ ನಳಿನಿಯವರಿಗೆ ಹಸ್ತಾಂತರಿಸಿದರು. ತಹಶೀಲ್ದಾರ್ ಡಾ.ಸ್ಮಿತಾ ರಾಮು ಉಪಸ್ಥಿತರಿದ್ದರು.
ಬಂಟ್ವಾಳ: ಕೋವಿಡ್ ಸೋಂಕಿನಿಂದ ಮೃತಪಟ್ಟ ಉಪತಹಶೀಲ್ದಾರರ ಕುಟುಂಬಕ್ಕೆ ಪರಿಹಾರ ಧನ ವಿತರಣೆ
Photo Credit :
By Author
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.