News Karnataka Kannada
Sunday, May 05 2024
ಮಂಗಳೂರು

ಬಂಟ್ವಾಳ : ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ

Bantwal
Photo Credit : By Author

ಬಂಟ್ವಾಳ : ವಿಜ್ಞಾನದ ಆವಿಷ್ಕಾರಗಳು ಜಗತ್ತನ್ನು ಅತಿವೇಗದಲ್ಲಿ ಕೊಂಡೊಯ್ಯುತ್ತಿದೆ, ವಿದ್ಯಾರ್ಥಿ ಸಮೂಹ ಇಂತಹಾ ವೈಜ್ಞಾನಿಕ ಕುತೂಹಲಗಳನ್ನು ಹೆಚ್ಚಿಸಿಕೊಳ್ಳುವ ಮೂಲಕ ಹೆಚ್ಚಿನ‌ ಜ್ಞಾನ ಸಂಪಾದಿಸಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ-ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ಕಾರ್ಮೆಲ್ ಬಾಲಕಿಯರ ಪ್ರೌಢಶಾಲೆ, ಮೊಡಂಕಾಪು ಇವರ ಸಂಯುಕ್ತ ಆಶ್ರಯದಲ್ಲಿ ಮೊಡಂಕಾಪು ವಿನಲ್ಲಿ ಗುರುವಾರ ನಡೆದ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ- 2022 ಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಡಯಟ್ ಪ್ರಾಂಶುಪಾಲೆ ರಾಜಲಕ್ಷ್ಮೀ‌ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್,
ಶಾಲಾ ಜೊತೆ ಕಾರ್ಯದರ್ಶಿ ಭಗಿನಿ ರೋಸಿಲ್ಡ್ ಎಸಿ, ಸವಿತಾ ಸೌಹಾರ್ದ ಸಹಕಾರಿ ಸಂಘ ಉಪಾಧ್ಯಕ್ಷ ಸುರೇಶ್ ಎನ್ , ಕಾರ್ಮೆಲ್ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ನೇತ್ರಾವತಿ, ಬಿಆರ್ ಸಿ ರಾಘವೇಂದ್ರ ಬಳ್ಳಾಲ್,  ಡಯಟ್ ಉಪನ್ಯಾಸಕರು, ಶಿಕ್ಷಕರ ಸಂಘಟನೆಗಳ ಪ್ರಮುಖರು, ಶಿಕ್ಷಣ ಸಂಯೋಜಕರು ಮೊದಲಾದವರು ಉಪಸ್ಥಿತರಿದ್ದರು. ನೋಡಲ್ ಅಧಿಕಾರಿ ಶ್ರೀನಿವಾಸ ಅಡಿಗ ಸ್ವಾಗತಿಸಿದರು.

ಕಾರ್ಮೆಲ್ ಶಾಲೆಯ ಮುಖ್ಯ ಶಿಕ್ಷಕಿ ಭಗಿನಿ ನವೀನ ಸ್ವಾಗತಿಸಿ, ಶಿಕ್ಷಕಿ‌ ಪ್ರತಿಮಾ ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು