News Karnataka Kannada
Wednesday, May 01 2024
ಮಂಗಳೂರು

ಬಂಟ್ವಾಳ: ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ

Bantwal: Distribution of two-wheelers to scheduled caste and scheduled tribe beneficiaries
Photo Credit : News Kannada

ಬಂಟ್ವಾಳ: ಡಾ. ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮತ್ತು ಆದಿ ಜಾಂಭವ ಅಭಿವೃದ್ಧಿ ನಿಗಮಗಳ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ನೀಡುವ ದ್ವಿಚಕ್ರ ವಾಹನ ಸೌಲಭ್ಯವನ್ನು ಬಂಟ್ವಾಳ ಶಾಸಕ ರಾಜೇಶ್‌ ಉಳಿಪ್ಪಾಡಿಗುತ್ತು ಬಿಸಿರೋಡಿನ ರಕ್ತೇಶ್ವರಿ ದೇವಸ್ಥಾನದ ಮುಂಭಾಗ ನಡೆದ ಕಾರ್ಯಕ್ರಮದಲ್ಲಿ ವಿತರಿಸಿದರು.

ಒಟ್ಟು 25 ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನು ವಿತರಣೆ ಮಾಡಲಾಗಿದೆ, ಉಳಿದ ಫಲಾನುಭವಿಗಳಿಗೆ ಕಚೇರಿಯಲ್ಲಿ ವಿತರಿಸಲಾಗುತ್ತದೆ ಎಂದು ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.

ಬಂಟ್ವಾಳ ದಲ್ಲಿ ಅತೀ ಹೆಚ್ಚು 70 ಫಲಾನುಭವಿಗಳಿಗೆ ಸೌಲಭ್ಯ ನೀಡಲಾಗಿದ್ದು ಈಗಾಗಲೇ 29 ಮಂದಿಗೆ ವಿತರಿಸಲಾಗಿದೆ. ಉಳಿದಿರುವ ಸೌಲಭ್ಯಗಳನ್ನು ಕ್ರಮಬದ್ದವಾಗಿ ಕಚೇರಿಯಲ್ಲಿ ವಿತರಿಸಲಾಗುತ್ತದೆ ಎಂದು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮನೀಶ್ ನಾಯಕ್ ತಿಳಿಸಿದರು.

ಈ ಸಂದರ್ಭ ಬಾಳ್ತಿಲ ಗ್ರಾ.ಪಂ.ಅಧ್ಯಕ್ಷ ಹಿರಣ್ಮಯಿ, ನರಿಕೊಂಬು ಗ್ರಾ.ಪಂ.ಅಧ್ಯಕ್ಷೆ ವನಿತಾ ಪುರುಷೋತ್ತಮ, ಎಸ್.ಟಿ.ಮೋರ್ಚಾದ ಅಧ್ಯಕ್ಷ ರಾಮ ನಾಯ್ಕ, ಪ್ರಧಾನ ಕಾರ್ಯದರ್ಶಿ ಯಶವಂತ ನಗ್ರಿ, ಎಸ್.ಸಿ.ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿಶ್ವನಾಥ ಚೆಂಡ್ತಿಮಾರ್, ಗ್ರಾ.ಪಂ.ಸದಸ್ಯರಾದ ಪ್ರಶಾಂತ್ ಪೂಜಾರಿ ವಿಷ್ಣುಕೋಡಿ, ಪ್ರಮುಖರಾದ ಮಹೇಶ್‌ ಶೆಟ್ಟಿ ಜುಮಾದಿಗುಡ್ಡೆ, ಚರಣ್ ಜುಮಾದಿಗುಡ್ಡೆ, ಶಶಿರಾಜ್ ಶೆಟ್ಟಿ ಸರಪಾಡಿ,ರಮೇಶ್ ರಾವ್ ಮಂಚಿ ಮತ್ತಿತರರು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು