ಬಂಟ್ವಾಳ: ಮಾಜಿ ಸಚಿವರಾದ ಬಿ.ರಮನಾಥ ರೈ ರವರ ಹುಟ್ಟು ಹಬ್ಬದ ಪ್ರಯುಕ್ತ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ದುರ್ಗಾ ನಮಸ್ಕಾರ ಪೂಜೆ ನಡೆಯಿತು.
ರವಿ ಶಾಂತಿ ಮತ್ತು ಬಳಗದವರು ವೈದಿಕ ವಿಧಿವಿದಾನ ನೆರವೇರಿಸಿದರು.ಇದೇ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಸದಸ್ಯರಿಂದ ರಮನಾಥ ರೈ ರವರನ್ನು ಶಾಲು ಹೊದಿಸಿ ಗೌರವಿಸಲಾಯ್ತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಕು.ದಿಶಾ ಬರಿಮಾರು ರವರನ್ನು ಮಾಜಿ ಸಚಿವ ರಮಾನಾಥ ರೈ ರವರು ಸನ್ಮಾನಿಸಿದರು,
ಕಾರ್ಯಕ್ರಮದಲ್ಲಿ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ಜಯಂತಿ ವಿ ಪೂಜಾರಿ,ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶಾಲೇಟ್ ಪಿಂಟೊ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾದ್ಯಕ್ಷರಾದ ಮಲ್ಲಿಕಾ ವಿ.ಶೆಟ್ಟಿ,ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮಾಜಿ ನಿರ್ದೇಶಕರಾದ ಪಿಯೂಸ್ ಎಲ್ ರೋಡ್ರಿಗಸ್,ಮಾಜಿ ಜಿಲ್ಲಾ ಪಂ ಸದಸ್ಯರಾಸ ಪದ್ಮಶೇಖರ್ ಜೈನ್,ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್,ಪುರಸಭಾ ಸದಸ್ಯರಾದ ವಾಸು ಪೂಜಾರಿ,ಮಾಣಿ ಬಿಲ್ಲವ ಸಂಘದ ಗೌರವದ್ಯಕ್ಷರುಗಳಾದ ಈಶ್ವರ ಪೂಜಾರಿ, ನಾರಾಯಣ ಸಾಲ್ಯಾನ್,ಮಾಣಿ ಬಿಲ್ಲವ ಸಂಘದ ಅಧ್ಯಕ್ಷರಾದ ಸುರೇಶ್ ಸೂರ್ಯ, ಪ್ರಮುಖರಾದ ಡಾ.ಮನೋಹರ್ ರೈ, ನಿರಂಜನ್ ರೈ,ಶ್ರೀಧರ್ ರೈ,ಮಂಜುಳಾ ಕುಶಾಲ ಪೆರಾಜೆ,ಆಶೋಕ್ ಬರಿಮಾರ್,ಕುಶಾಲ ಪೆರಾಜೆ,ಉಮೇಶ್ ಕುಲಾಲ್,ಐಡಾ ಸುರೇಶ್ ವೆಂಕಪ್ಪ ಪೂಜಾರಿ,ಶಿವಪ್ರಸಾದ್ ಕಳ್ಳಿಗೆ,ಸತೀಶ್ ಅನಂತಾಡಿ,ಪ್ರೀತಿ ಡಿ ಕುನ್ಹಾ,ರಮಣಿ ಮಾಣಿ. ಹಾಗೂ ಪಾಣೆಮಂಗಳೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಪದಾಧಿಕಾರಿಗಳು ಮತ್ತು ಮಹಿಳಾ ಕಾರ್ಯಕರ್ತರು ಉಪಸ್ಥಿತರಿದ್ದರು.
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…
ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ.
ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…