News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ: ಕೆಲಿಂಜ ಗುಡ್ಡೆಗೆ ಬೆಂಕಿ, ಅಪಾರ ನಷ್ಟ

Bantwal: Fire breaks out at Kelinja Gudde, massive loss of lives
Photo Credit : By Author

ಬಂಟ್ವಾಳ: ಆಕಸ್ಮಿಕವಾಗಿ ಗುಡ್ಡೆಗೆ ಬೆಂಕಿ ತಗುಲಿ ಅಪಾರ ನಷ್ಡ ಸಂಭವಿಸಿದ ಘಟನೆ ಕೆಲಿಂಜ ಎಂಬಲ್ಲಿ ನಡೆದಿದೆ. ಕೆಲಿಂಜ ಕಲ್ಮಲೆ ವೀರಕಂಭ ರಕ್ಷಿತಾ ಅರಣ್ಯಕ್ಕೆ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ ಎನ್ನಲಾಗಿದೆ.

ಬೆಂಕಿ ಬೀಳಲು ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ,ಬೆಂಕಿಯನ್ನು ನಂದಿಸಲು ಗ್ರಾಮಸ್ಥರು ಹಾಗೂ ಅಗ್ನಿಶಾಮಕ ದಳದವರು ಹರಸಹಸ ಪಡುತ್ತಿದ್ದಾರೆ. ಮೀಸಲು ಅರಣ್ಯ ಇಲಾಖೆಗೆ ಸೇರಿದ ಗುಡ್ಡೆ ಇದಾಗಿದ್ದು, ಕಾಡಿನಲ್ಲಿ ಕೋಟ್ಯಾಂತರ ರೂ ಬೆಲೆ ಬಾಳುವ ವಿವಿಧ ಜಾತಿಯ ಮರಗಳಿದ್ದು, ಬಹತೇಕ ಮರಗಳು ಬೆಂಕಿಗಾಹುತಿಯಾಗಿದೆ.

ಇದರ ಜೊತೆಗೆ ರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾಡು ಪ್ರಾಣಿಗಳು ಇದ್ದು, ಸಣ್ಣ ಸಣ್ಣ ಪ್ರಾಣಿಗಳು ಜೀವ ಕಳೆದುಕೊಂಡರೆ , ಉಳಿದ ಪ್ರಾಣಿಗಳು ಜೀವಭಯದಿಂದ ಕಾಡು ಬಿಟ್ಟು ಹೋಗುವ ಸ್ಥಿತಿ ನಿರ್ಮಾಣ ವಾಗಿದೆ. ಕಳೆದ ಬಾರಿಯೂ ಇದೇ ಮಾದರಿಯಲ್ಲಿ ಕಾಡಿಗೆ ಬೆಂಕಿ ಬಿದಿದ್ದು, ಅಪಾರ ನಷ್ಟ ಉಂಟಾಗಿತ್ತು.

ಕಾಡಿನಲ್ಲಿ ಹತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಮೂರು ದಿನಗಳು ಬೇಕಾಗಿತ್ತು. ಕಾಡಿನ ಮಧ್ಯೆ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮ್ ರ್  ನಿಂದಾಗಿ ಬೆಂಕಿ ಹತ್ತಿಕೊಂಡಿರಬಹುದು ಎಂಬ ಶಂಕೆಯನ್ನು ಸ್ಥಳೀಯ ರು ವ್ಯಕ್ತಪಡಿಸಿತ್ತಿದ್ದು, ಕಾರಣ ತಿಳಿದುಬಂದಿಲ್ಲ. ಅರಣ್ಯ ಇಲಾಖೆಯ ಅಧಿಕಾರಿ ಪ್ರೀತಂ ಹಾಗೂ ಸಿಬ್ಬಂದಿ ಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು