ಬಂಟ್ವಾಳ: ಮಂಗಳೂರಿನಲ್ಲಿ ಇಂಟರ್ವ್ಯೂಗೆ ಹೋದ ಯುವತಿಯೋರ್ವಳು ನಾಪತ್ತೆಯಾದ ಬಗ್ಗೆ ವಿಟ್ಲ ಠಾಣೆಯಲ್ಲಿ ದೂರು ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಕಂಬಳಬೆಟ್ಟು ನಿವಾಸಿ ದಿ.ಆನಂದ ಅವರ ಪುತ್ರಿ ಸುಶ್ಮಿತ ( 21) ನಾಪತ್ತೆಯಾದ ಯುವತಿ.ನ.8 ರಂದು ಮಂಗಳವಾರ ಬೆಳಿಗ್ಗೆ ಮನೆಯಿಂದ ಮಂಗೂರಿನಲ್ಲಿ ಕೆಲಸವೊಂದರ ಇಂಟರ್ವ್ಯೂಗೆ ಮನೆಯಿಂದ ಹೋದವಳು ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ ಎಂದು ವಿಟ್ಲ ಪೋಲೀಸ್ ಠಾಣೆಗೆ ದೂರು ನೀಡಿದ್ದಾರೆ.