News Karnataka Kannada
Saturday, May 04 2024
ಮಂಗಳೂರು

ಬಂಟ್ವಾಳ: ತಾಲೂಕಿನಾದ್ಯಂತ ಭಾರೀ ಮಳೆ, ಮೈತುಂಬಿ ಹರಿಯುತ್ತಿದೆ ನೇತ್ರಾವತಿ

Red alert issued in several states of the country as more rainfall predicted in the coming days
Photo Credit : By Author

ಬಂಟ್ವಾಳ : ತಾಲೂಕಿನಾದ್ಯಂತ ಕಳೆದೊಂದು ವಾರದಿಂದ ಭಾರೀ ಮಳೆ ಮುಂದುವರಿದಿದ್ದು, ಜೀವನದಿ ನೇತ್ರಾವತಿ ಮೈತುಂಬಿ ಹರಿಯುತ್ತಿದೆ. ಭಾನುವಾರ ಬೆಳಿಗ್ಗೆಯಿಂದಲೇ ನದಿ ನೀರಿನ ಮಟ್ಟದಲ್ಲಿ ನಿರಂತರ ಏರಿಕೆ ಕಂಡುಬರುತ್ತಿದ್ದು, ಅಪಾಯದ ಮಟ್ಟ ಮೀರಿ ಅಂದರೆ 8.5 ಮೀಟರ್ ಮೀರಿ ಹರಿಯುತ್ತಿದೆ.

ನದಿ ತೀರದ ತಗ್ಗು ಪ್ರದೇಶಗಳಿಗೆ ನೆರೆ ನೀರು ನುಗ್ಗಿದ್ದು, ಜಕ್ರಿಬೆಟ್ಟು, ಬಡ್ಡಕಟ್ಟೆ, ಪಾಣೆಮಂಗಳೂರು, ಆಲಡ್ಕ, ಬೋಗೋಡಿ, ಗುಡ್ಡೆಅಂಗಡಿ, ನಂದಾವರ, ಗೂಡಿನಬಳಿ, ಬಂಟ್ವಾಳ, ಕೆಳಗಿಪೇಟೆ, ಬಡ್ಡಕಟ್ಟೆ, ನಾವೂರು, ಮೈಂದಾಳ, ಸರಪಾಡಿ, ಅಜಿಲಮೊಗರು ಮೊದಲಾದ ಪ್ರದೇಶಗಳ ತಗ್ಗು ಪ್ರದೇಶಗಳ ಮನೆ-ಅಂಗಡಿಗಳತ್ತ ನೀರು ಆವರಿಸಿದ್ದು ಪರಿಸರವಾಸಿಗಳು ಶನಿವಾರ ರಾತ್ರಿಯೇ ತಾಲೂಕಾಡಳಿತ ಹಾಗೂ ಕಂದಾಯ ಅಧಿಕಾರಿಗಳ ಸೂಚನೆಯಂತೆ ಅಪಾಯ ಅರಿತು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿದ್ದಾರೆ. ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ಆಟದ ಮೈದಾನ ನೀರಿನಿಂದ ಆವೃತವಾಗಿದೆ.

ಭಾನುವಾರ ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಮುಸ್ಲಿಂ‌ ಕುಟುಂಬಗಳು ತೊಂದರೆ ಅನುಭವಿಸಿದರೂ ಸುರಕ್ಷತೆಯ ಕಡೆಗೆ ಗಮನ ನೀಡಿದ್ದಾರೆ. ಬಂಟ್ವಾಳ ಶಾಸಕ ಯು ರಾಜೇಶ್ ನಾಯಕ್ ಕೆಲ ತಗ್ಗು ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಜನರ ಸುರಕ್ಷತೆಗೆ ಗಮನ‌ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಭಾನುವಾರ ಮಧ್ಯಾಹ್ನದ ಬಳಿಕ ಮಳೆ ಕಡಿಮೆಯಾಗಿದ್ದು, ನದಿ ನೀರಿನ ಹರಿವಿನಲ್ಲೂ ಕೊಂಚ ಇಳಿಮುಖ ಕಂಡುಬಂದಿದೆ. ಆದರೂ ತಗ್ಗು ಪ್ರದೇಶದ ಜನರ ಆತಂಕ ಇನ್ನೂ ದೂರವಾಗಿಲ್ಲ. ತಾಲೂಕಾಡಳಿತ ಹಾಗೂ ಕಂದಾಯ ಅಧಿಕಾರಿಗಳು ಜಿಲ್ಲಾಡಳಿತ ಸೂಚನೆಯಂತೆ ಕಟ್ಟೆಚ್ಚರ ಪಾಲಿಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು