News Karnataka Kannada
Saturday, May 04 2024
ಮಂಗಳೂರು

ಬಂಟ್ವಾಳ: ಮತದಾರರು ನೀಡಿದ ಪ್ರತಿಯೊಂದು ಮತಕ್ಕೂ ನ್ಯಾಯ ಸಿಗುವ ಕೆಲಸ ಮಾಡಿದ್ದೇನೆ- ರಾಜೇಶ್ ನಾಯ್ಕ್

Bantwal: I have worked towards getting justice for every vote cast by the voters: Rajesh Naik
Photo Credit : News Kannada

ಬಂಟ್ವಾಳ: ಬಂಟ್ವಾಳ ಕ್ಷೇತ್ರದ ಮತದಾರರು ನೀಡಿದ ಪ್ರತಿಯೊಂದು ಮತಕ್ಕೂ ನ್ಯಾಯ ಸಿಗುವ ಕೆಲಸವನ್ನು ಅತ್ಯಂತ ಪ್ರಾಮಾಣಿಕ ಪ್ರಯತ್ನದ ಮೂಲಕ ಮಾಡಿದ್ದೇನೆ ಎಂಬ ಆತ್ಮ ತೃಪ್ತಿ ಇದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದರು.

ಅವರು ಬಂಟ್ವಾಳ ಮಂಡಲದ ವತಿಯಿಂದ ಬಿಸಿರೋಡಿನ ಸ್ಪರ್ಶ ಕಲಾ ಮಂದಿರದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ರೈತ ಮೋರ್ಚಾದ ಬೃಹತ್ ಸಮಾವೇಶದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪಾದಯಾತ್ರೆ ಯಲ್ಲಿ ಅಭೂತಪೂರ್ವ ಬೆಂಬಲ ಪ್ರೀತಿ ಸಿಕ್ಕಿದೆ ಅದು ನನಗೆ ಸಿಕ್ಕಿದ ದೊಡ್ಡ ಆಸ್ತಿ ಎಂದು ಸಂತಸ ವ್ಯಕ್ತಪಡಿಸಿದರು. ಯಡಿಯೂರಪ್ಪ ಅವರು ಸರಕಾರ ರಚನೆ ಮಾಡಿದ ಫಲವಾಗಿ ಬಂಟ್ವಾಳ ಕ್ಷೇತ್ರದಲ್ಲಿ ಹಿಂದೆಂದಿಗಿಂತಲೂ ಅಧಿಕವಾಗಿ ಅಭೂತಪೂರ್ವ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಸಾಧ್ಯವಾಯಿತು ಎಂದು ಅವರಿಗೆ ಅಭಿನಂದನೆ ಸಲ್ಲಿಸಿದರು. ಬಂಟ್ವಾಳದಲ್ಲಿ 24496 ಕೃಷಿಕರಿಗೆ ರೈತ ಕಿಸಾನ್ ಸನ್ಮಾನ್ ಯೋಜನೆ, 21 ಕೋಟಿ ರೂ. ಫಸಲ್ ಬಿಮಾ ಯೋಜನೆ ಯ ಮೂಲ ಕ ಸಿಕ್ಕಿದೆ. 13 ಕೋಟಿ ವೆಚ್ಚದಲ್ಲಿ ಜಕ್ರಿಬೆಟ್ಟು ಎಂಬಲ್ಲಿ ಕಿಂಡಿಅಣೆಕಟ್ಟು ಸಹಿತ ಸೇತುವೆ ನಿರ್ಮಾಣವಾಗಲಿದ್ದು, ಇದು ಈ ಭಾಗದ ರೈತರಿಗೆ ಅತ್ಯಂತ ಹೆಚ್ಚು ಪ್ರಯೋಜನವಾಗಲಿದೆ ಎಂದರು.

ಕಾರ್ಯಕ್ರಮವನ್ನು ಉದ್ಘಾಟಿಸಿ ದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ ಮೂಡಬಿದರೆ ಅವರು ಮಾತನಾಡಿ, ಕೃಷಿ ಮತ್ತು ಋಷಿ ಪರಂಪರೆಯನ್ನು ಹೊಂದಿರುವ ಭಾರತ ದೇಶ ಕೃಷಿಯಲ್ಲಿ ಪರಿವರ್ತನೆಯನ್ನು ಹೊಂದಿದ್ದು, ಉನ್ನತ ಸಾಧನೆ ಮಾಡಿದ ಬಾರತದತ್ತ ಇಡೀ ಜಗತ್ತು ನೋಡುವಂತಿದೆ. ಇಸ್ರೇಲ್ ಮಾದರಿಯ ಕೃಷಿಯನ್ನು ಮಾಡುವ ದೇಶಗಳಿಗೆ ಇಸ್ರೇಲ್ ಗೆ ಕೃಷಿ ಪರಂಪರೆಯನ್ನು ನೀಡಿದ ದೇಶ ಭಾರತ ಎಂಬ ಸತ್ಯ ಗೊತ್ತಿರಬೇಕು ಎಂದರು.

ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಮಾತನಾಡಿ, ಅಭಿವೃದ್ದಿಯ ಶಕೆ ಪ್ರಾರಂಭವಾಗಿದ್ದು ಜನರು ಬಿಜೆಪಿಯತ್ತ ಆಕರ್ಷಣೆಯಾಗಿದ್ದಾರೆ. ಕಾಂಗ್ರೇಸ್ ಹತಾಶೆಯಿಂದ ಚುನಾವಣೆ ಬಂದಾಗ ಅಧಿಕಾರದ ಆಸೆಯಿಂದ ಸುಳ್ಳು ಆಶ್ವಾಸನೆಗಳು ನೀಡಲು ಪ್ರಾರಂಭಿಸಿದೆ.

ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡಬಿದರೆ ಅವರು ಹಿಂಗಾರವನ್ನು ಅರಳಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳಿಗೆ ಬೆಲ್ಲ ನೀರು, ಸಾಲು ನೀಡಿ ಗೌರವಿಸಿದರು.

ವೇದಿಕೆಯಲ್ಲಿ ಕಿಯೋನಿಕ್ಸ್ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಮಾಜಿ ಶಾಸಕರುಗಳಾದ ಎ.ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ರಾಜ್ಯ ನೀರು ಸರಬರಾಜು, ಒಳಚರಂಡಿ ನಿಗಮದ ನಿರ್ದೇಶಕಿ ಸುಲೋಚನ ಜಿ.ಕೆ.ಭಟ್ ಬಂಟ್ವಾಳ ಮಂಡಲದ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ರಾಮ್ ದಾಸ ಬಂಟ್ವಾಳ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕೊರಗಪ್ಪ ನಾಯ್ಕ್ ,ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದೀರ್ , ರೈತ ಮೋರ್ಚಾದ ಪ್ರಭಾರಿ ಕೇಶವ ಭಟ್ ಮುಳಿಯ, ಮೋರ್ಚಾಗಳ ಜಿಲ್ಲಾ ಸಂಯೋಕ ಈಶ್ವರ ಕಟೀಲು , ಜಿಲ್ಲಾ ಮಾದ್ಯಮ ಪ್ರಮುಖ್ ಸಂದೇಶ್ ಶೆಟ್ಟಿ, ರೈತ ಮೋರ್ಚಾದ ಬಂಟ್ವಾಳ ಮಂಡಲದ ಅಧ್ಯಕ್ಷ ವಿಶ್ವನಾಥ ಪೂಜಾರಿ,ಮೂಡಬಿದರೆ ರೈತ ಮೋರ್ಚಾದ ಅಧ್ಯಕ್ಷ ಸೋಮನಾಥ, ಬೆಳ್ತಂಗಡಿ ರೈತ ಮೋರ್ಚಾದ ಅಧ್ಯಕ್ಷ ಜಯಂತ ಗೌಡ, ರೈತ ಮೋರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ವಸಂತ ಅಣ್ಣಳಿಕೆ, ರಾಘವೇಂದ್ರ ಭಟ್, ಮಂಡಲದ ಚುನಾವಣಾ ಪ್ರಭಾರಿ ರವಿ ಶಂಕರ್ ಮಿಜಾರು, ಮಂಗಳೂರು ವಿಭಾಗದ ಸಂಘಟನಾ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ರೈತ ಮೋರ್ಚಾದ ಅಧ್ಯಕ್ಷ ರಾಧಕೃಷ್ಣ ಬೊಳ್ಳೂರು ಅವರು ಅತಿಥಿಗಳನ್ನು ಸ್ವಾಗತಿಸಿದರು.
ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಕುಮಾರ್ ಶೆಟ್ಟಿ ಮೇನಾಲ ವಂದಿಸಿದರು. ಬಂಟ್ವಾಳ ಮಂಡಲದ ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು