ಬಂಟ್ವಾಳ: ಮಾರಾಟ ಮಾಡಲು ಅವಕಾಶ ಇಲ್ಲದ ಸಿಮೆಂಟ್ ನ್ನು ಮನೆಕಟ್ಟಲು ಬಳಕೆಮಾಡುವ ಉದ್ದೇಶದಿಂದ ಅಕ್ರಮವಾಗಿ ದಾಸ್ತಾನು ಇರಿಸಲಾಗಿದ್ದ ಜಾಗಕ್ಕೆ ಬಂಟ್ವಾಳ ತಹಶಿಲ್ದಾರ್ ನೇತ್ರತ್ವದ ತಂಡ ದಾಳಿ ನಡೆಸಿದೆ.
ದಾಳಿ ವೇಳೆ ದೊರೆತ ಸಿಮೆಂಟ್ ನ್ನು ವಶಕ್ಕೆ ಪಡೆದುಕೊಂಡು ಪರಿಶೀಲನೆ ನಡೆಸಿ ಬಳಿಕ ಹೆಚ್ಚಿನ ತನಿಖೆಗಾಗಿ ಬಂಟ್ವಾಳ ಪುರ ಸಭೆಗೆ ಪ್ರಕರಣವನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ.
ಪಲ್ಲಮಜಲು ನಿವಾಸಿ ಸೋಮಸುಂದರ ಕೆ. ಅವರ ಮನೆ ನಿರ್ಮಾಣಕ್ಕೆ ಮಾರಾಟಕ್ಕೆ ಅವಕಾಶವಿಲ್ಲದ 21 ಸಿಮೆಂಟ್ ಗೋಣಿ ಚೀಲಗಳು ಸ್ಥಳದಲ್ಲಿ ಪತ್ತೆಯಾಗಿದೆ ,ಇದರ ಜೊತೆಗೆ ಖಾಲಿಯಾದ ಐದು ಗೋಣಿ ಸಿಮೆಂಟ್ ಚೀಲಗಳು ಪತ್ತೆಯಾಗಿದೆ. ಈ ಬಗ್ಗೆ ತನಿಖೆ ಮುಂದುವರಿದಿದೆ.