ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ವೈದ್ಯಧಿಕಾರಿಗಳ ಕಚೇರಿ, ಬಂಟ್ವಾಳ ಹಾಗೂ ನಗರ ಪ್ರಾಥಮಿಕ ಅರೋಗ್ಯ ಕೇಂದ್ರ ಬಂಟ್ವಾಳ ಇದರ ವತಿಯಿಂದ ಮೆದುಳು ಜ್ವರ ಲಸಿಕಾ ಅಭಿಯಾನದ ಉದ್ಘಾಟನೆ ಕಾರ್ಯಕ್ರಮವು ಡಿ. 5ರಂದು ಇನ್ಪೆಂಟ್ ಜಿಸೆಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಮೊಡಂಕಾಪುವಿನಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಫಾದರ್ ವಲೇರಿಯನ್ ಡಿಸೋಜ ಬಂಟ್ವಾಳ ತಾಲೂಕು ವೈದ್ಯಧಿಕಾರಿ ಡಾ| ಅಶೋಕ್ ಕುಮಾರ್ ರೈ, ಕ್ಷೇತ್ರ ಶಿಕ್ಷಣಧಿಕಾರಿ ಕಚೇರಿ ಸಂಯೋಜಕರಾದ ಪ್ರತಿಮಾ, ಶಾಲಾ ಮುಖ್ಯೋಪಾಧ್ಯಾಯರಾದ ಟಿಸ್ಸಾ, ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ಹೆರಾಲ್ಡ್ ಡಿಸೋಜ, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ನಗರ ಅರೋಗ್ಯ ಕೇಂದ್ರ ಬಂಟ್ವಾಳದ ವೈದ್ಯಾಧಿಕಾರಿ ಡಾ| ಅಶ್ವಿನಿ ಸ್ವಾಗತಿಸಿ, ತಾಲೂಕು ಹಿರಿಯ ಪ್ರಾಥಮಿಕ ಸುರಕ್ಷಾಣಾಧಿಕಾರಿ ಮಮತಾ ವಂದಿಸಿದರು, ತಾಲೂಕು ಹಿರಿಯ ನಿರೀಕ್ಷಣಾಧಿಕಾರಿ ಕುಸುಮ ನಿರೂಪಿಸಿದರು.