News Karnataka Kannada
Wednesday, May 01 2024
ಮಂಗಳೂರು

ಬಂಟ್ವಾಳ: 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

Bantwal: Invitation card released for 22nd Kannada Sahitya Sammelana
Photo Credit : By Author

ಬಂಟ್ವಾಳ: ನವೆಂಬರ್ 12 ಮತ್ತು 13ರಂದು ಅಮ್ಮುಂಜೆಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಒಡ್ಡೂರು ಫಾರ್ಮ್ಸ್ ನಲ್ಲಿ ಶನಿವಾರ ಬಿಡುಗಡೆಗೊಳಿಸಿ, ಶುಭ ಹಾರೈಸಿದರು.

ಈ ಸಂದರ್ಭ ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷರಾದ ವಿಶ್ವನಾಥ ಬಂಟ್ವಾಳ, ಸ್ವಾಗತ ಸಮಿತಿ ಅಧ್ಯಕ್ಷರಾದ ಉಮೇಶ್ ಸಾಲಿಯಾನ್ ಬೆಂಜನಪದವು, ಕಾರ್ಯಾಧ್ಯಕ್ಷರಾದ ಸಂಪತ್ ಕುಮಾರ್ ಶೆಟ್ಟಿ ಅಮ್ಮುಂಜೆಗುತ್ತು, ಪ್ತಧಾನ ಸಂಚಾಲಕರಾದ ಅಬುಬಕ್ಕರ್ ಅಮ್ಮುಂಜೆ, ಉಪಾಧ್ಯಕ್ಷರಾದ ಪೊಳಲಿ ವೆಂಕಟೇಶ ನಾವಡ, ಅಮ್ಮುಂಜೆ ಗ್ರಾಮ ಪಂಚಾಯತಿ ಅಧ್ಯಕ್ಷ ವಾಮನ ಆಚಾರ್ಯ, ಸ್ವಾಗತ ಸಮಿತಿ ಜೊತೆಕಾರ್ಯದರ್ಶಿ ಪ್ರಸಾದ್ ಕೊಳಂಬೆಕೋಡಿ, ಆರ್ಥಿಕ ಸಮಿತಿ ಸಂಚಾಲಕ ಸುಕೇಶ್ ಚೌಟ, ಮೆರವಣಿಗೆ ಸಮಿತಿ ಸಂಚಾಲಕ ಕಾರ್ತಿಕ್ ಬಲ್ಲಾಳ್, ಪ್ರಮುಖರಾದ ನಾರಾಯಣ ಅಮ್ಮುಂಜೆ, ಕಸಾಪ ತಾಲೂಕು ಘಟಕದ ಗೌ.ಪ್ರಧಾನ ಕಾರ್ಯದರ್ಶಿ ರಮಾನಂದ ನೂಜಿಪ್ಪಾಡಿ, ಮಾಜಿ‌ ಅಧ್ಯಕ್ಷ ಜಯಾನಂದ ಪೆರಾಜೆ, ವಿಟ್ಲ ಹೋಬಳಿ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು‌, ಮಾರ್ಗದರ್ಶನ ಮಂಡಳಿ ಸದಸ್ಯ ಹರೀಶ ಮಾಂಬಾಡಿ ಉಪಸ್ಥಿತರಿದ್ದರು.

ಕಸಾಪ ಮಾಜಿ ಅಧ್ಯಕ್ಷ ಜಯಾನಂದ ಪೆರಾಜೆ ಸ್ವಾಗತಿಸಿ, ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು