ಬಂಟ್ವಾಳ: ಜೀವನದ ಪ್ರತಿ ದಿನದ ಜಂಜಾಟದ ಕೆಲಸದ ಒತ್ತಡದಲ್ಲಿ ಸ್ವಲ್ಪ ಸಮಯ ಕ್ರೀಡೆಗೆ ಮೀಸಲಿರಿಸಿದಾಗ ನಾವು ಮಾನಸಿಕವಾಗಿ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಸಾಧ್ಯ. ಕ್ರೀಡೆ ನಮ್ಮೆಲ್ಲರನ್ನೂ ಒಗ್ಗೂಡಿಸಲು ಸಹಕಾರಿ ಎಂದು ಬಂಟ್ವಾಳ ಮೆಸ್ಕಾಂ ಕಾರ್ಯನಿರ್ವಾಹಕ ಇಂಜಿನೀಯರ್ ಪ್ರಶಾಂತ್ ಪೈ ಹೇಳಿದರು.
ಅವರು ವಿಟ್ಲ ಮೆಸ್ಕಾಂ ಅಧಿಕಾರಿ/ನೌಕರರ ಸಂಘ, ಕೆಪಿಟಿಸಿಎಲ್ ಹಾಗೂ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆ ದಾರರ ಸಂಘ ಪ್ರಾಥಮಿಕ ಸಮಿತಿ ವಿಟ್ಲ ಮೆಸ್ಕಾಂ ಉಪ ವಿಭಾಗ ಇದರ ಆಶ್ರಯದಲ್ಲಿ ವಿಟ್ಲ ಮಾದರಿ ಶಾಲೆಯ ಮೈದಾನದಲ್ಲಿ ನಡೆದ ೯ನೇ ವರ್ಷದ ದಸರಾ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ಮೆಸ್ಕಾಂ ಸಹಾಯಕ ಇಂಜಿನೀಯರ್ ಪ್ರವೀಣ ಜೋಷಿ ವಹಿಸಿದ್ದರು. ಅತಿಥಿಗಳಾಗಿ ಬಂಟ್ವಾಳ ಮೆಸ್ಕಾಂ ವಿಭಾಗೀಯ ಕಛೇರಿಯ ಲೆಕ್ಕಾಧಿಕಾರಿ ಚಂದ್ರಶೇಖರ, ಕೆಪಿಟಿಸಿಎಲ್ ವಿಟ್ಲ ಮೆಸ್ಕಾಂ ಸಹಾಯಕ ಇಂಜಿನೀಯರ್ ಈರಣ್ಣ ಗೌಡ, ಕೆಪಿಟಿಸಿಎಲ್ ನೌಕರರ ಸಂಘದ ಕೇಂದ್ರೀಯ ಸಮಿತಿ ಸದಸ್ಯ ಶಂಕರ ಪ್ರಕಾಶ, ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ಜಿಲ್ಲಾ ಸಮಿತಿ ಸದಸ್ಯ ಬಾಲಕೃಷ್ಣ ಸೆರ್ಕಳ, ವಿದ್ಯುತ್ ಗಿತ್ತಿಗೆ ದಾರರ ಸಮಿತಿ ಉಪಾಧ್ಯಕ್ಷ ಕೃಷ್ಣ ಬನಾರಿ, ಮೆಸ್ಕಾಂ ಪ.ಜಾ.ಪ.ಪಂ ಕೇಂದ್ರ ಸಮಿತಿ ಸದಸ್ಯ ದಿನೇಶ್, ಕಿರಿಯ ಇಂಜಿನೀಯರ್ ಗೀತಾ. ಮಾಪಕ ಓದುಗರ ಮೇಲ್ವಿಚಾರಕ ಅಕ್ಷಯ ಶೆಟ್ಟಿ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಪದ್ಮನಾಭ ಪಿ ಇವರನ್ನು ಸನ್ಮಾನಿಸಲಾಯಿತು. ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ವಿಟ್ಲ ಉಪ ಸಮಿತಿ ಅಧ್ಯಕ್ಷ ಲಕ್ಷ್ಮೀನಾರಾಯಣ ಅಡ್ಯಂತಾಯ ಅಧ್ಯಕ್ಷತೆ ವಹಿಸಿದ್ದರು.
ಅತಿಥಿಗಳಾಗಿ ನೆಟ್ಲ ಮುಡ್ನೂರು ಕೆಪಿಟಿಸಿಎಲ್ ಸಹಾಯಕ ಕಾರ್ಯನಿವಾಹಕ ಇಂಜಿನೀಯರ್ ದೇವದಾಸ್ ಕೊಟ್ಟಾರಿ, ಮೆಸ್ಕಾಂ ಮಂಗಳೂರು ವೃತ್ತದ ಸಹಾಯಕ ರವಿಚಂದ್ರ, ವಿಟ್ಲ ಮೆಸ್ಕಾಂ ಸಹಾಯಕ ಲೆಕ್ಕಾಧಿಕಾರಿ ನೆಲ್ಸನ್ ನವೀನ್ ಕುಮಾರ್, ಶೀಬಾ ಇಲೆಕ್ಟಿçಕಲ್ನ ಜಾನ್, ವಿದ್ಯುತ್ ಗುತ್ತಿಗೆದಾರ ಬಾಬು ಮೂಲ್ಯ, ಶಾಖಾಧಿಕಾರಿಗಳಾದ ಸತೀಶ್ ಮತ್ತು ಪ್ರಸನ್ನ ಉಪಸ್ಥಿತರಿದ್ದರು. ಕ್ರಿಕೆಟ್ ಪ್ರಥಮ ಕೆಪಿಟಿಸಿಎಲ್ ದ್ವಿತೀಯ ಮಾಣಿ ಮೆಸ್ಕಾಂ. ಕಬಡ್ಡಿ ಪ್ರಥಮ ಸಾಲೆತ್ತೂರು ಮೆಸ್ಕಾಂ, ದ್ವಿತೀಯ ಉಕ್ಕುಡ ಮೆಸ್ಕಾಂ, ವಾಲಿಬಾಲ್ ಪ್ರಥಮ ಸಾಲೆತ್ತೂರು ಮೆಸ್ಕಾಂ, ದ್ವಿತೀಯ ವಿಟ್ಲ ಮೆಸ್ಕಾಂ, ಹಗ್ಗಜಗ್ಗಾಟ ಪ್ರಥಮ ಕೆಪಿಟಿಸಿಎಲ್, ದಿತೀಯ ವಿದ್ಯುತ್ ಗುತ್ತಿಗೆದಾರರ ಸಂಘ ವಿಟ್ಲ, ಶಿಸ್ತು ಬದ್ಧ ತಂಡ ಪ್ರಶಸ್ತಿಯನ್ನು ಕನ್ಯಾನ ಮೆಸ್ಕಾಂ ಗಳಿಸಿತು.
ವಿಟ್ಲ ಮೆಸ್ಕಾಂ ಸಹಾಯಕ ಇಂಜಿನೀಯರ್ ಸತೀಶ ಸಪಲ್ಯ ಸ್ವಾಗತಿದರು. ಉಕ್ಕುಡ ಶಾಖಾಧಿಕಾರಿ ಆನಂದ ವಂದಿಸಿದರು. ಕೆಪಿಟಿಸಿಎಲ್ ವಿಟ್ಲ ನೌಕರರ ಸಂಘದ ಪ್ರಾಥಮಿಕ ಸಮಿತಿ ಅಧ್ಯಕ್ಷ ಪದ್ಮನಾಭ ಅಡ್ಯೇಯಿ ನಿರೂಪಿಸಿದರು.
ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ಗೆ ಸುಪ್ರೀಂಕೋರ್ಟ್ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.
ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್ ಶವವಾಗಿ ಪತ್ತೆಯಾಗಿದ್ದಾನೆ.
2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…
ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…