News Karnataka Kannada
Thursday, May 02 2024
ಮಂಗಳೂರು

ಬಂಟ್ವಾಳ: ನಿರತ ಸಾಹಿತ್ಯ ಪ್ರಶಸ್ತಿಗೆ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆ

K.V. Chandrakala Nandavar selected for Busy Sahitya Puraskaram
Photo Credit : News Kannada

ಬಂಟ್ವಾಳ: ನಿರತ ಸಾಹಿತ್ಯ ಸಂಪದ, ಕಡೆಗೋಳಿ ಬಂಟ್ವಾಳ ಇದರ ಈ ಬಾರಿಯ ಸಾಹಿತ್ಯ ಪ್ರಶಸ್ತಿಗೆ ಸಾಹಿತಿ ಕೆ.ವಿ ಚಂದ್ರಕಲಾ ನಂದಾವರ ಆಯ್ಕೆಯಾಗಿದ್ದಾರೆ.

ಸಾಹಿತ್ಯ ಕ್ಷೇತ್ರದಲ್ಲಿನ ಇವರ ವಿಶೇಷ ಸಾಧನೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ನವೆಂಬರ್ 6ರಂದು ಬಿಸಿರೋಡ್‌ನ ಕನ್ನಡ ಭವನ ಸಭಾಂಗಣದಲ್ಲಿ ನಡೆಯಲಿರುವ ನಿರತದ 25ನೇ ವರ್ಷಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.

1996ರಲ್ಲಿ ಸಮಾನ ಮನಸ್ಕ ಸಾಹಿತ್ಯಾಸಕ್ತರಿಂದ ಪ್ರಾರಂಭಗೊಂಡ ನಿರತ ಸಾಹಿತ್ಯ ಸಂಪದ ಹಲವು ಸಾಹಿತ್ಯಪರ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿದ್ದು, ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಹಲವು ದಿಗ್ಗಜರಿಗೆ ಪ್ರಶಸ್ತಿಯನ್ನು ನೀಡುತ್ತಾ ಬಂದಿದೆ.

ಕೆ.ವಿ ಚಂದ್ರಕಲಾ ನಂದಾವರ:

1950ರಲ್ಲಿ ಜನಿಸಿದ ಇವರು ತಮ್ಮ‌ ಸ್ನಾತಕೋತ್ತರ ಶಿಕ್ಷಣದ ಬಳಿಕ ಶಿಕ್ಷಕಿ, ಉಪನ್ಯಾಸಕಿ ಹಾಗೂ ಪ್ರಾಂಶುಪಾಲೆಯಾಗಿ ಸೇವೆ ಸಲ್ಲಿಸಿ ಸದ್ಯ ನಿವೃತ್ತರಾಗಿದ್ದಾರೆ. ಸಾಹಿತ್ಯದಲ್ಲಿ ಅಪಾರ ಆಸಕ್ತಿ ಹೊಂದಿದ್ದ ಇವರು ಈ ನಡುವೆ ಹಲವಾರು ಕೃತಿ, ಕವನ ಸಂಕಲನ, ಲೇಖನ ಸಂಕಲನಗಳನ್ನು, ಅಧ್ಯಯನಾತ್ಮಕ ಕೃತಿಗಳನ್ನು ಪ್ರಕಟಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಕೊಡುಗೆಗಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವು ರಾಜ್ಯಮಟ್ಟದ ಪ್ರಶಸ್ತಿಗಳು ಅರಸಿ ಬಂದಿತ್ತು. ಹಲವಾರು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ಇವರ ಇನ್ನೊಂದು ಕೃತಿಯು ಬಿಡುಗಡೆಗೆ ಸಿದ್ಧಗೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು