Categories: ಮಂಗಳೂರು

ಬಂಟ್ವಾಳ: ಮಾದಕ ನಿದ್ರಾಜನಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಬಂಟ್ವಾಳ: ಮಾದಕ ನಿದ್ರಾಜನಕ ವಸ್ತುವಾದ ಎಂ.ಡಿ.ಎಂ.ಎ. ಸಾಗಾಟ ಮಾಡುತ್ತಿದ್ದ ಪ್ರಕರಣವೊಂದರಲ್ಲಿ ಗುರುವಾರ ಬಂಟ್ವಾಳ ನಗರ ಠಾಣಾ ಪೊಲೀಸರು ಇಬ್ಬರನ್ನು ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ ಬಂಧಿಸಿದ್ದಾರೆ.

ಬಿಕಸ್ಟಾ ಗ್ರಾಮದ ಬಾರೆಕಾಡು ನಿವಾಸಿ ಇರ್ಷಾದ್ (25) ಮತ್ತು ಕಾಸರಗೋಡು ಮಂಜೇಶ್ವರ ತಾಲೂಕಿನ ದೀಕ್ಷಿತ್ ಯಾನೆ ಅಪ್ಪೂಸ್ (19) ಎಂಬಿಬ್ಬರು ಬಂಧಿತರು. ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ಅವರು ಸಿಬ್ಬಂದಿ ಜೊತೆ ಗಸ್ತಿನಲ್ಲಿದ್ದ ವೇಳೆ ಸಂಜೆ ಸುಮಾರು ಸಂಜೆ 5 ಗಂಟೆಯ ವೇಳೆಗೆ ಬಿ,ಮೂಡ ಗ್ರಾಮದ ಗೂಡಿನಬಳಿಗೆ ಹೋಗುವ ರಸ್ತೆಯಲ್ಲಿ ವಾಹನಗಳನ್ನು ತಪಾಸಣೆ ಮಾಡಿಕೊಂಡಿರುವಾಗ ನಾರಾಯಣಗುರು ವೃತ್ತದ ಕಡೆಯಿಂದ ಬಂದ ಆರೋಪಿಗಳಿಬ್ಬರು ಪ್ರಯಾಣಿಸುತ್ತಿದ್ದ ಆಟೋರಿಕ್ಷಾವನ್ನು ನಿಲ್ಲಿಸಲು ಸೂಚಿಸಿ ದಾಖಲಾತಿ ಕೇಳಿದಾಗ ಚಾಲಕನ ವರ್ತನೆಯಲ್ಲಿ ಅನುಮಾನ ಕಂಡು ವಿಚಾರಣೆ ನಡೆಸಿದ್ದಾರೆ. ಈ ಸಂದರ್ಭ ಎಂಡಿಎಂಎ ನಿದ್ರಾಜನಕ ಸೊತ್ತನ್ನು ಸೇವಿಸಿರುವುದು ಗಮನಕ್ಕೆ ಬಂದಿದೆ.

ಇರ್ಷಾದ್ ಬಳಿಯಿಂದ 4 ಗ್ರಾಮ್ ತೂಕ ಹಾಗೂ ದೀಕ್ಷಿತ್ ಬೆಳೆಯಿಂದ 5 ಗ್ರಾಮ್ ತೂಕದ ನಿದ್ರಾಜನಕ ಸೊತ್ತಾದ ಎಂಡಿಎಂಎ ಮಾತ್ರೆ ಇದ್ದು, ಸುಮಾರು 20 ಸಾವಿರ ಮೌಲ್ಯದ್ದಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಆರೋಪಿಗಳನ್ನು ಎಂಡಿಎಂಎ ಸೊತ್ತು ಹಾಗೂ ರಿಕ್ಷಾಸಹಿತ ಬಂಧಿಸಿ ಪ್ರಕರಣ ದಾಖಲಿಸಲಾಯಿತು.

Sneha Gowda

Recent Posts

ಚುನಾವಣಾ ಪ್ರಚಾರದ ಹಕ್ಕು “ಮೂಲಭೂತವಲ್ಲ”: ಕೇಜ್ರಿವಾಲ್ ಜಾಮೀನಿಗೆ ಇಡಿ ಆಕ್ಷೇಪ

ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು ನೀಡುವುದಕ್ಕೆ ಜಾರಿ ನಿರ್ದೇಶನಾಲಯ ಗುರುವಾರ ವಿರೋಧಿಸಿದೆ.

7 mins ago

ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು  ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

58 mins ago

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…

59 mins ago

ಪ್ರಜ್ವಲ್ ಪೆನ್‍ಡ್ರೈವ್ ಕೇಸ್; ಸಂತ್ರಸ್ತೆಗೆ ಮೂವರಿಂದ ಬೆದರಿಕೆ

ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…

1 hour ago

ನೂರು ರೋಗಗಳಿಗೂ ಒಂದೇ ಔಷಧ ಪಾನೀಯ: ಎಳನೀರು

ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ  ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…

1 hour ago

ಪಟಾಕಿ ಘಟಕ ಸ್ಫೋಟಗೊಂಡು 8 ಕಾರ್ಮಿಕರು ಸಾವು !

ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.

1 hour ago