News Karnataka Kannada
Monday, May 06 2024
ಮಂಗಳೂರು

ಬಂಟ್ವಾಳ: ಸರಣಿ ಅಪಘಾತದಲ್ಲಿ ಓರ್ವ ಸಾವು

Bantwal: Mescom Vitla Assistant Executive Engineer Praveen Joshi dies in road accident
Photo Credit : By Author

ಬಂಟ್ವಾಳ: ಬಂಟ್ವಾಳ- ಧರ್ಮಸ್ಥಳ ರಾಷ್ಟ್ರೀಯ ಹೆದ್ದಾರಿಯ ಮಣಿಹಳ್ಳ ಸಮೀಪ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎರಡು ಕಾರುಗಳಿಗೆ ಬಸ್‌ ಡಿಕ್ಕಿಯಾಗಿ ನಡೆದ ಸರಣಿ ಅಪಘಾತದಲ್ಲಿ ಮೆಸ್ಕಾಂ ವಿಟ್ಲದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರವೀಣ್ ಜೋಷಿ (45) ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸಲ್ಪಟ್ಟರೂ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯುವಶರಾಗಿದ್ದಾರೆ. ಪತ್ನಿ, ಮಗ ಮತ್ತು ಮಗಳನ್ನು ಅವರು ಅಗಲಿದ್ದಾರೆ.

ಮಣಿಹಳ್ಳ ಸಮೀಪ ಜೋಷಿ ಚಲಾಯಿಸುತ್ತಿದ್ದ ಕಾರು ಸಹಿತ ಇನ್ನೊಂದು ಕಾರು ಹಾಗೂ ಬಸ್ಸಿನ ನಡುವೆ ಈ ಅಪಘಾತ ಸುಮಾರು 11 ಗಂಟೆಯ ವೇಳೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದರೆ, ಗಾಯಾಳುವನ್ನು ಹೊರತೆಗೆಯಲೂ ಸ್ಥಳೀಯರು ಪ್ರಯಾಸಪಟ್ಟರು. ಕೂಡಲೇ ಆಂಬುಲೆನ್ಸ್ ಮೂಲಕ ತುಂಬೆ ಹಾಗೂ ಅಲ್ಲಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಗಂಭೀರವಾಗಿ ಗಾಯಗೊಂಡಿದ್ದ ಜೋಷಿ ಚಿಕಿತ್ಸೆಗೆ ಸ್ಪಂದಿಸದೆ ಅಸು ನೀಗಿದ್ದಾರೆ.

ಬಂಟ್ವಾಳ ಕಡೆಯಿಂದ ವಗ್ಗ ಕಡೆಗೆ ಹೋಗುತ್ತಿದ್ದ ಬ್ರಿಝಾ ಕಾರು, ವಗ್ಗದ ಮದ್ವದಲ್ಲಿ ತನ್ನ ಮನೆಯಿಂದ ಬರುತ್ತಿದ್ದ ಮೆಸ್ಕಾಂನ ಪ್ರವೀಣ್ ಜೋಷಿ ಅವರ ಕಾರುಗಳ ನಡುವೆ ಅಪಘಾತ ಸಂಭವಿಸಿತ್ತು ಹಿಂಬದಿಯಿಂದ ಬಂದ ಬಸ್‌ ಕಾರುಗಳಿಗೆ ಡಿಕ್ಕಿ ಹೊಡೆದು ಮತ್ತಷ್ಟು ತೀವ್ರತೆಗೆ ಕಾರಣವಾಯಿತು. ವಿಜಯಲಕ್ಷ್ಮಿ ಗ್ರೂಪ್ ನ ಕ್ರೇನ್ ಬಳಸಿ ಅಪಘಾತ ನಡೆದ ವಾಹನಗಳನ್ನು ರಸ್ತೆಯಿಂದ ಬದಿಗೆ ಸೇರಿಸಲಾಯಿತು. ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಎಸ್‌.ಐ ಮೂರ್ತಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದು, ಬಂಟ್ವಾಳ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು