ಮಂಗಳೂರು

ಬಂಟ್ವಾಳ ಕ್ಷೇತ್ರದಲ್ಲಿ ಶಾಸಕ ರಾಜೇಶ್ ನಾಯ್ಕ್ ಬಿರುಸಿನ ಪ್ರಚಾರ

ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ವಿಧಾನಸಭಾ ಕ್ಷೇತ್ರಗಳಲ್ಲಿ ಒಂದಾಗಿರುವ ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ,‌ಹಾಲಿ ಶಾಸಕ ರಾಜೇಶ್ ನಾಯ್ಕ್ ಬಿರುಸಿನ ಪ್ರಚಾರ ಕಾರ್ಯದಲ್ಲಿ ತೊಡಗಿದ್ದು, ಶನಿವಾರ ತಮಿಳುನಾಡು‌ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಬಂಟ್ವಾಳಕ್ಕೆ ಆಗಮಿಸಿ, ಮತ್ತಷ್ಟು ಹುರುಪು ತುಂಬಿಸಿದ್ದಾರೆ.

ಚುನಾವಣೆಗೆ ದಿನ ಘೋಷಣೆಗೂ ಮುನ್ನವೇ ಈ ಬಾರಿ ತನ್ನ ಸ್ಪರ್ಧೆಗೆ ಪಕ್ಷವೇ ಅವಕಾಶ ಕಲ್ಪಿಸುವ ವಿಶ್ವಾಶ ವ್ಯಕ್ತ ಪಡಿಸಿದ್ದ ಶಾಸಕ ರಾಜೇಶ್ ನಾಯ್ಕ್, ಈ ಬಾರಿ ಮೂರನೇ ಬಾರಿ ಬಂಟ್ವಾಳದ ಹುಲಿ ರಮಾನಾಥ ರೈ ವಿರುದ್ಧ ಸ್ಪರ್ಧೆ ಮಾಡುತ್ತಿದ್ದಾರೆ. 2013 ರ ನೊದಲ ಸ್ಪರ್ಧೆಯಲ್ಲಿ ಸೋಲುಂಡಿದ್ದ ರಾಜೇಶ್ ನಾಯ್ಕ್ 2018 ರಲ್ಲಿ 15 ಸಾವಿರ ಮತಗಳ ಅಂತರದಿಂದ ಜಯಸಾಧಿಸಿದ್ದರು.

ಅದರಂತೆ ಕಳೆದ ನಾಲ್ಕು ವರ್ಷ ಹತ್ತು ತಿಂಗಳ ಅವಧಿಯಲ್ಲಿ ಎರಡು ಸಾವಿರ ಕೋಟಿಗೂ ಅಧಿಕ ಅನುದಾನದ ಮೂಲಕ ಬಂಟ್ವಾಳದಲ್ಲಿ ಅಭಿವೃದ್ಧಿ ಕಾರ್ಯನಡೆಸಿದ್ದಾರೆ. ಅವರದೇ ಮಾತಿನಲ್ಲಿ ಹೇಳುವುದಾದರೆ,” ಬಂಟ್ವಾಳ ಕ್ಷೇತ್ರದ ಶಾಸಕನಾಗಿ ನಿಜವಾದ ರಾಜಧರ್ಮವನ್ನು ಪಾಲಿಸಿ, ಆಡಳಿತ ನಿರ್ವಹಿಸಿದ ತೃಪ್ತಿ ತನಗಿದೆ.

2018 ರಲ್ಲಿ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಶಾಸಕನಾಗಿ ಆಯ್ಕೆಯಾದ ಬಳಿಕ ಆರಂಭದಲ್ಲಿ ವಿರೋಧ ಪಕ್ಷದ ಶಾಸಕನಾಗಿದ್ದೆ, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಬಳಿಕದ ಎರಡು ವರ್ಷ ಕೋವಿಡ್ ಎದುರಾಗಿತ್ತು.‌ಆ ಸಂಕಷ್ಡಗಳ‌ ನಡುವೆಯೂ ಜನರ ಜೊತೆಗಿದ್ದು ಸೇವೆ ನೀಡಿದ ತೃಪ್ತಿ ತನಗಿದೆ. ರಾಜಧರ್ಮವನ್ನು ಪಾಲಿಸಿ ಸವರ್ವಜನರಿಗೂ ನ್ಯಾಯ ಒದಗಿಸುವ ಕೆಲಸ ಮಾಡುತ್ತೇನೆ ಎಂದು ನೀಡಿದ ಮಾತಿಗೆ ಬದ್ದನಾಗಿ ಕ್ಷೇತ್ರದ ಜನರ ಹಿತ ಕಾಯುವ ಕೆಲಸ ಮಾಡಿದ್ದೇನೆ.

ಶಾಸಕನಾಗಿ 2 ಸಾವಿರ ಕೋಟಿಗೂ ಅಧಿಕ ಅನುದಾನಗಳ ಮೂಲಕ ಬಂಟ್ವಾಳ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ, ನನ್ನ ಅವಧಿಯಲ್ಲಿ  ಬಂಟ್ವಾಳ ಕ್ಷೇತ್ರ ವ್ಯಾಪ್ತಿಯಲ್ಲಿ ಯಾವುದೇ ಒಂದು ಕೋಮುಗಲಭೆ, ಅಹಿತಕರ ಘಟನೆಗಳು ನಡೆಯದಿರುವುದು ಬಹಳ ಸಂತೃಪ್ತಿ ತಂದಿದೆ.  ಕುಡಿಯುವ ನೀರು, ರಸ್ತೆ ಸಹಿತ ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡಿರುವುದಾಗಿ ಹೆಮ್ಮೆಯಿಂದ ತಿಳಿಸುವ ಇವರು, ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಸುತ್ತಿರುವ ಬಿರುಸಿನ ಚುನಾವಣಾ ಪ್ರಚಾರದಲ್ಲಿ ಇದನ್ನೇ ಮುಖ್ಯ ವಿಷಯವನ್ನಾಗಿಸಿದ್ದಾರೆ.

ಭಾನುವಾರದಂದು ಕ್ಷೇತ್ರವ್ಯಾಪ್ತಿಯಲ್ಲಿ ಬಿಜೆಪಿ ವತಿಯಿಂದ ಮನೆಮನೆ ಮಹಾ ಅಭಿಯಾನವನ್ನು ಬೂತ್ ಮಟ್ಟದಲ್ಲಿ ನಡೆಸಲಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿ ಅಭೂತಪೂರ್ವ ಸ್ಪಂದನೆ ದೊರೆತಿದೆ. ಪ್ರತಿಷ್ಠಿತ ಕ್ಷೇತ್ರವಾಗಿರುವ ಬಂಟ್ವಾಳಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೇ.6 ರಂದು ಆಗಮಿಸಿ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಕಳೆದ ಚುನಾವಣೆಯ ಸಂದರ್ಭದಲ್ಲೂ ಯೋಗಿ ಆದಿತ್ಯ ನಾಥ್ ಭೇಟಿ ಬಂಟ್ವಾಳದ ಬಿಜೆಪಿ ಕಾರ್ಯಕರ್ತರಲ್ಲಿ ಹುರುಪುತುಂಬಿದ್ದು, ಈ ಬಾರಿಯ ಭೇಟಿ ಯಾವ ರೀತಿಯ ಲಾಭ ತಂದುಕೊಡುತ್ತದೆ ಎನ್ನುವುದನ್ನು ಕಾದುನೋಡಬೇಕಾಗಿದೆ.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

9 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

10 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

10 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

10 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

11 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

11 hours ago