ಬಂಟ್ವಾಳ: ವಿಧಾನ ಸಭಾ ಕ್ಷೇತ್ರದ 7 ಜಿ.ಪಂ.ಕ್ಷೇತ್ರ ವ್ಯಾಪ್ತಿಯ ಜನಸ್ಪಂದನಾ ಕಾರ್ಯಕ್ರಮದ ಬಳಿಕ ಜಿಲ್ಲಾಮಟ್ಟದ ಅಧಿಕಾರಿಗಳ ಉಪಸ್ಥಿತಿಯಲ್ಲಿ ವಿಶೇಷ ಸಭೆ ನಡೆಸಲಾಗುವುದು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹೇಳಿದ್ದಾರೆ.
ಪಾಣೆಮಂಗಳೂರು ಸತ್ಯಶ್ರೀ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ನಡೆದ ಗೋಳ್ತಮಜಲು ಜಿ.ಪಂ.ಕ್ಷೇತ್ರಕ್ಕೆ ಒಳಪಟ್ಟ ನರಿಕೊಂಬು, ಬಾಳ್ತಿಲ, ಕಡೇಶ್ವಾಲ್ಯ,ಬರಿಮಾರು, ಗೋಳ್ತಮಜಲು ಗ್ರಾಮಪಂಚಾಯತ್ ವ್ಯಾಪ್ತಿಯ ಜನಸ್ಪಂದನಾ ಸಭೆಯನ್ನುಉದ್ಘಾಟಿಸಿ ಮಾತನಾಡಿದರು.
ಜನತೆಯ ಸಮಸ್ಯೆಗಳಿಗೆ ಶೀಘ್ರವಾಗಿ ಸ್ಪಂದಿಸಬೇಕೆನ್ನುವ ಉದ್ದೇಶದಿಂದ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಪರಿಷಾಮಕಾರಿಯಾಗಿ ನಡೆಯುತ್ತಿದೆ ಎಂದರು.ಬಂಟ್ವಾಳ ತಹಶೀಲ್ದಾರ್ ಡಾ.ಸ್ಮಿತಾ ರಾಮು ಮಾತನಾಡಿ, ತಾಲೂಕಿನ ಆಡಳಿತ ವ್ಯವಸ್ಥೆಯೇ ಜನರ ಬಳಿಗೆ ಬಂದು ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಶಾಸಕರ ಚಿಂತನೆಯಂತೆ ಈ ಕಾರ್ಯಕ್ತಮ ನಡೆಯುತ್ತಿದೆ ಎಂದರು.
ನರಿಕೊಂಬು ಗ್ರಾ.ಪಂ.ಅಧ್ಯಕ್ಷೆ ವಿನುತಾ ಪುರುಷೋತ್ತಮ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ , ಬಾಳ್ತಿಲ ಗ್ರಾಮಪಂಚಾಯತ್ ಅಧ್ಯಕ್ಷೆ ಹಿರಣ್ಮಯಿ, ಗೋಳ್ತಮಜಲು ಗ್ರಾ.ಪಂ.ಅಧ್ಯಕ್ಷ ಅಭಿಷೇಕ್ ಶೆಟ್ಟಿ, ಕಡೇಶಿವಾಲಯ ಗ್ರಾ.ಪಂ.ಅಧ್ಯಕ್ಷ ಸುರೇಶ್ ಬನಾರಿ, ಬರಿಮಾರು ಗ್ರಾ.ಪಂ.ಅಧ್ಯಕ್ಷೆ ಶಶಿಕಲಾ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಪ್ರದೀಪ್ ಡಿ.ಸೋಜ,ರಾಜೇಶ್ ಬಳಿಗಾರ್, ಜಿ.ಕೆ.ನಾಯಕ್, ಜ್ಞಾನೇಶ್, ಬಿಂದಿಯಾ ನಾಯಕ್, ತಾರಾನಾಥ್, ಡಾ! ಅಶೋಕ್ ಕುಮಾರ್ ರೈ, ಜೈ ಪ್ರಕಾಶ್, ಶೀಲಾವತಿ, ಮರ್ಲಿನ್ ಡಿ.ಸೋಜ, ವಿವೇಕಾನಂದ, ಉಷಾ, ಮತ್ತಿತರರು ಉಪಸ್ಥಿತರಿದ್ದರು.
ತಾ.ಪಂ.ಇ.ಒ.ರಾಜಣ್ದ ಸ್ವಾಗತಿಸಿ,ಶಿವು ಬಿರಾದರ್ ವಂದಿಸಿದರು.ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.