ಮಂಗಳೂರು

ಬಂಟ್ವಾಳ: ರಾಜಕೀಯ ಜೀವನದ ಕೊನೆಯ ಚುನಾವಣಾ ಸ್ಪರ್ಧೆ, ಬಿ.ರಮಾನಾಥ ರೈ ಹೇಳಿಕೆ

ಬಂಟ್ವಾಳ: ಕರ್ನಾಟಕ ವಿಧಾನಸಭೆಗೆ 2023 ರಲ್ಲಿ ನಡೆಯುವ ಚುನಾವಣೆಗೆ ನನ್ನ ಕೊನೆಯ ಸ್ಪರ್ಧೆ, ಜನತೆ ಆಶೀರ್ವಾದ ಮಾಡಿದರೆ ಮುಂದಿನ ಅವಧಿಯಲ್ಲಿ ಅದ್ಬುತ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸುತ್ತೆನೆ. ನಾನು ಹಿಂದೆ ಏನು ಹೇಳಿದ್ದೆನೆ ಅದನ್ನು ಮಾಡಿದ್ದೇನೆ, ಆಗ ಮಾಡಿದನ್ನು ಈಗಲು ಹೇಳುತ್ತೇನೆ ಇದು ನನ್ನ ಜಾಯಮಾನವಾಗಿದೆ ಎಂದು ಮಾಜಿ ಸಚಿವ,ಕೆಪಿಸಿಸಿ ಉಪಾಧ್ಯಕ್ಷ ಬಿ.ರಮಾನಾಥ ರೈ ತಿಳಿಸಿದರು.

ಬುಧವಾರ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅಪಪ್ರಚಾರದಿಂದಾಗಿ ಕಳೆದ ಚುನಾವಣೆಯಲ್ಲಿ ನನಗೆ ಕಳೆದ ಸೋಲಾಗಿರುವುದು ನಿಜ, ಆದರೆ ಜನರಿಗೆ ಈಗ ಮನವರಿಕೆಯಾಗಿದ್ದು, ಜನರು‌ ಆಶೀರ್ವಾದ ಮಾಡುತ್ತಾರೆಂಬ ವಿಶ್ವಾಸವಿದೆ ಎಂದರು.

ಆರು ಬಾರಿ ಬಂಟ್ವಾಳದ ಜನತೆ ನನ್ನನ್ನು ಶಾಸಕನಾಗಿ ಮಾಡಿದ್ದು,ಇಲ್ಲಿಯ ಜನರ ಋಣ ನನ್ನ ಮೇಲಿದೆ. ಇದನ್ನು ಬದುಕಿನ ಕೊನೆಯವರೆಗೂ ಮರೆಯಲು ಸಾಧ್ಯವಿಲ್ಲ,ರಾಜಕೀಯ ಜೀವನದ ಇದೇ ನನ್ನ ಕೊನೆಯ ಚುನಾವಣಾ ಸ್ಪರ್ಧೆಯಾಗಿದೆ ಎಂದ ಅವರು ಒಬ್ಬ ಪ್ರಾಮಾಣಿಕ ರಾಜಕಾರಣಿಗೆ ರಾಜಕೀಯ ಮಾಡುವುದು ಸುಲಭದ ಮಾತಲ್ಲ, ಭೂಮಿ ಮಾರಿ ರಾಜಕೀಯ ಮಾಡಲು ನನ್ನಿಂದ ಸಾಧ್ಯವಿಲ್ಲ, ನಾನು ಎಂದು ಕೂಡ ಸುಳ್ಳು ಹೇಳುವುದಿಲ್ಲ ಎಂದು ಅವರು ತಿಳಿಸಿದರು.

ನಿರುದ್ಯೋಗ,ಬೆಲೆ ಏರಿಕೆ:
ನಿರುದ್ಯೋಗ ಮತ್ತು ಬೆಲೆ ಏರಿಕೆ ವಿಚಾರವನ್ನು ಮುಂದಿಟ್ಟು ಈ ಭಾರಿಯ ಚುನಾವಣೆ ನಡೆಯಲಿದೆ. ಸಿದ್ದರಾಮಯ್ಯರು ಮುಖ್ಯಮಂತ್ರಿಯಾಗಿದ್ದಾಗ ಜನಪರವಾದ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯನ್ನು ಈಡೇರಿಸಿದೆ. ಇದೀಗ ಪಕ್ಷ ಘೋಷಿಸಿರುವ ಮೂರು ಗ್ಯಾರಂಟಿಯನ್ನು ಕೂಡ ಪೂರೈಸುವ ಶಕ್ತಿ ಕಾಂಗ್ರೆಸ್ ಗಿದೆ ಎಂದು ರಮಾನಾಥ ರೈ ತಿಳಿಸಿದರು.

ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ:
ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಇಡೀ ದ.ಕ.ಜಿಲ್ಲೆಯಲ್ಲಿ ಅತೀ ಹೆಚ್ಚು ಅಭಿವೃದ್ಧಿ ಕಾರ್ಯಗಳನ್ನು ಬಂಟ್ವಾಳ ಕ್ಷೇತ್ರದಲ್ಲಿ ಮಾಡಿದ್ದೇನೆ.ಸರಿಸುಮಾರು 5 ಸಾವಿರ ಕೋಟಿಗೂ ಮಿಕ್ಕಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿದ್ದೆನೆ. ಆಗ ಉಸ್ತುವಾರಿ ಮಂತ್ರಿಯಾಗಿ ಎಲ್ಲಾ ಅಭಿವೃದ್ಧಿ ಕೆಲಸವನ್ನು ಬಂಟ್ವಾಳದಲ್ಲಿ ಮಾಡಿದ್ದಾರೆ ಎಂಬ ಸ್ವಪಕ್ಷದ ಶಾಸಕರ ಆರೋಪಕ್ಕು ಆಗ ನಾನು ಗುರಿಯಾಗಿದ್ದೆ ಎಂದು‌ ನೆನಪಿಸಿದರು.

ಯಾರೋ ಮಾಡಿದ ಕಾಮಗಾರಿಯನ್ನು ನಾನು ಮಾಡಿದ್ದೇನೆ ಎಂದು ಹೇಳುವಷ್ಟು ಸಣ್ಣ ವ್ಯಕ್ತಿಯಲ್ಲ. ಕಾರಿಂಜ, ಪೊಳಲಿ, ನಿಟಿಲೇಶ್ವರ ದೇವಸ್ಥಾನದ ಜೊತೆಗೆ ಎಲ್ಲಾ ಸಮಾಜದ ಧಾರ್ಮಿಕ ಕೇಂದ್ರ ಗಳ ಅಭಿವೃದ್ಧಿಗೂ ಪ್ರಾಮಾಣಿಕ ಪ್ರಯತ್ನ ಮಾಡಿದ್ದೆನೆ ಎಂದರು.

ಅನಂತಾಡಿಯಲ್ಲಿ ಇಷ್ಟು ವರ್ಷ ಕಾಂಗ್ರೇಸ್ ಪಕ್ಷದ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ ಉದಾಹರಣೆ ಇರಲಿಲ್ಲ.ಈಚೆಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಗೆಲುವು ಸಾಧಿಸಿರುವುದು ಸಂತಸ ತಂದಿದೆ ಎಂದರು.

ರಥಯಾತ್ರೆ
ಕಾಂಗ್ರೆಸ್ ಪಕ್ಷದ ವತಿಯಿಂದ ಮಾ.10 ರಂದು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದ ವಠಾರದಿಂದ ರಥಯಾತ್ರೆ ಆರಂಭವಾಗಲಿದ್ದು, ಪ್ರತಿದಿನ ಮೂರು ಗ್ರಾಮ ಪಂಚಾಯತನ್ನು ಕ್ರಮಿಸಲಿದೆ. ಈ ಯಾತ್ರೆ 14 ದಿನಗಳ ಕಾಲ ಬಂಟ್ವಾಳ ಕ್ಷೇತ್ರದಲ್ಲಿ ಸಂಚರಿಸಲಿದೆ.ಈ ಸಂದರ್ಭ ಹಿಂದೆ ಆಗಿರುವ ಅಭಿವೃದ್ಧಿ ಕೆಲಸಗಳ ಜತೆಗೆ ಸರಕಾರದ ವೈಫಲ್ಯವನ್ನು ಜನರಿಗೆ ತಿಳಿಸುವ ಕಾರ್ಯ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಪದ್ಮಶೇಖರ ಜೈನ್, ಮಾಯಿಲಪ್ಪ ಸಾಲಿಯಾನ್, ಅಬ್ಬಾಸ್ ಆಲಿ, ವೆಂಕಪ್ಪ ಪೂಜಾರಿ, ರಮೇಶ್ ನಾಯ್ಕ್ ರಾಯಿ, ಸುರೇಶ್ ಜೋರಾ, ಸುಭಾಶ್ಚಂದ್ರ ಶೆಟ್ಟಿ, ಜಗದೀಶ್ ಕೊಯಿಲ ಮತ್ತಿತರರು ಉಪಸ್ಥಿತರಿದ್ದರು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

4 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

5 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

5 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

5 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

6 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

6 hours ago