ಬಂಟ್ವಾಳ: ಜಿಲ್ಲೆಯಲ್ಲಿ ಗರಿಷ್ಟ ಸಂಖ್ಯೆಯಲ್ಲಿ ಇರುವ ಬಿಲ್ಲವರು ಇತರರನ್ನು ಅವಲಂಬಿಸುವ ಬದಲಾಗಿ ಸ್ವಾಭಿಮಾನಿಯಾಗಿ ಬೆಳೆದು ನಾಯಕತ್ವ ಗುಣ ಮೈಗೂಡಿಸಿಕೊಳ್ಳಬೇಕು. ಇದಕ್ಕಾಗಿ ಬ್ರಹ್ಮಶ್ರೀ ನಾರಾಯಣ ಗುರು ವಿಚಾರ ವೇದಿಕೆ ( ಎಸ್ ಎನ್ ಜಿ ವಿ) ಮೂಲಕ ಜನಜಾಗೃತಿ ಮೂಡಿಸಲು ಪ್ರತೀ ಗ್ರಾಮ ಮಟ್ಟದಲ್ಲಿ ಪ್ರತ್ಯೇಕ ಸಮಿತಿ ರಚಿಸುವ ಅಗತ್ಯವಿದೆ ಎಂದು ವೇದಿಕೆ ರಾಜ್ಯ ಘಟಕ ಅಧ್ಯಕ್ಷ ಸತ್ಯಜಿತ್ ಸುರತ್ಕಲ್ ಹೇಳಿದ್ದಾರೆ.
ಇಲ್ಲಿನ ಬಿ.ಸಿ.ರೋಡಿನಲ್ಲಿ ನಾರಾಯಣಗುರು ವಿಚಾರ ವೇದಿಕೆ ವತಿಯಿಂದ ಭಾನುವಾರ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು.
ಬಂಟ್ವಾಳ ತಾಲ್ಲೂಕು ಘಟಕ ಅಧ್ಯಕ್ಷ ನವೀನ್ ಕೋಟ್ಯಾನ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶ ಪಾಲನೆ ಜೊತೆಗೆ ಸಮಾನ ಮನಸ್ಕರನ್ನು ಸಂಘಟಿಸಿ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಮೇಲೆತ್ತುವ ಪ್ರಯತ್ನ ನಡೆಯಬೇಕು ಎಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ರಾಜೇಂದ್ರ ಪೂಜಾರಿ, ಸದಸ್ಯ ಪ್ರಕಾಶ ಕೋಡಿಮಜಲು, ಪ್ರಮುಖರಾದ ಸುಂದರ ಪೂಜಾರಿ ಮೆಲ್ಕಾರ್, ಗೋಪಾಲ ಪೂಜಾರಿ ಬ್ರಹ್ಮರಕೂಟ್ಲು, ಜಯ ಕೋಟ್ಯಾನ್ ಅಮ್ಟಾಡಿ, ಮನೋಜ್ ಬ್ರಹ್ಮರಕೂಟ್ಲು, ಯಶವಂತ ಪೂಜಾರಿ ನಾಯಿಲ ಮತ್ತಿತರರು ಉಪಸ್ಥಿತರಿದ್ದರು.