News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ: ಅಪ್ರಾಪ್ತ ಬಾಲಕನ ಮದುವೆ ನಿಲ್ಲಿಸಿದ ಅಧಿಕಾರಿಗಳು

Officials stop the marriage of a minor boy
Photo Credit : News Kannada

ಬಂಟ್ವಾಳ: ಅಪ್ರಾಪ್ತ ಬಾಲಕನೋರ್ವನಿಗೆ ಮದುವೆಗೆ ಸಿದ್ದತೆಯಲ್ಲಿರುವ ವೇಳೆ ಅಧಿಕಾರಿಗಳು ದಾಳಿ ನಡೆಸಿದ ಮದುವೆ ನಡೆಸದಂತೆ ಮುಚ್ಚಳಿಕೆ ಬರೆಸಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರ್ ಗ್ರಾಮದಲ್ಲಿ ನಡೆದಿದೆ.

ತೆಂಕಕಜೆಕಾರ್ ಗ್ರಾಮದ ಮಿತ್ತಳಿಕೆ ಎಂಬ ಮನೆಯಲ್ಲಿ ಅಪ್ರಾಪ್ತ ಬಾಲಕನೋರ್ವನಿಗೆ ನಾಳೆ ಮಾ.5 ರಂದು ಮದುವೆಯ ಸಕಲಸಿದ್ಧತೆಗಳನ್ನು ನಡೆದಿದ್ದು, ಅಧಿಕಾರಿಗಳಿಗೆ ದೊರೆತ ಮಾಹಿತಿಯಂತೆ ಮನೆಗೆ ಧಾವಿಸಿ, ಮದುವೆ ನಡೆಸದಂತೆ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

ಎರಡನೇ ಬಾರಿ ಮದುವೆಗೆ ಯತ್ನ: ಈ ಅಪ್ರಾಪ್ತ ಬಾಲಕನಿಗೆ ತಪ್ಪಿದ ಎರಡನೇಯ ಮದುವೆ. ಕಳೆದ ವರ್ಷ ಈತನಿಗೆ ಇದೇ ರೀತಿ ಮದುವೆಗಾಗಿ ಸಕಲ ಸಿದ್ದತೆಗಳು ನಡೆದಿದ್ದು, ಈ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು ಮನೆಗೆ ಹೋಗಿ ವಿಚಾರ ತಿಳಿಸಿ ಮದುವೆಯನ್ನು ನಿಲ್ಲಿಸಿದ್ದರು. ಇದೀಗ ಎರಡನೇ ಬಾರಿ ಅದೇ ರೀತಿ ಅಪ್ರಾಪ್ತ ಬಾಲಕನಿಗೆ ಮತ್ತೆ ಮದುವೆಗಾಗಿ ತಯಾರಿಯಲ್ಲಿದ್ದರು.  ಈ ಬಗ್ಗೆ ಮಾಹಿತಿ ತಿಳಿದ ಬಂಟ್ವಾಳ ಸಿ.ಡಿ.ಪಿ.ಒ‌‌.ಗಾಯತ್ರಿ ಕಂಬಳಿ ಅವರು ಪುಂಜಾಲಕಟ್ಟೆ ಎಸ್.ಐ.ಆಂಜನೇಯ ರೆಡ್ಡಿ ಹಾಗೂ ಸಿ.ಡಿ.ಪಿ.ಒ. ಇಲಾಖೆಯ ಇತರ ಅಧಿಕಾರಿಗಳೊಂದಿಗೆ ಮನೆಗೆ ತೆರಳಿ ಮದುವೆ ನಿಲ್ಲಿಸಿದ್ದಾರೆ.

ಸುಳ್ಳು ಸರ್ಟಿಫಿಕೇಟ್: ಕಳೆದ ಬಾರಿ ಅಪ್ರಾಪ್ತ ಬಾಲಕನಿಗೆ ಮದುವೆ ಮಾಡಲು ಅಧಿಕಾರಿಗಳು ಅವಕಾಶ ನೀಡಿಲ್ಲ ಎಂಬ ಕಾರಣಕ್ಕಾಗಿ ಪೋರ್ಜರಿ ಬರ್ತ್ ಸರ್ಟೀಪಿಕೇಟ್ ಸೃಷ್ಟಿಸಿ ಸ್ಥಳಕ್ಕೆ ಬಂದ ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಲು ನೋಡಿದ್ದಾರೆ. ಆದರೆ ಅಧಿಕಾರಿಗಳು ಇವರು ನೀಡಿದ ದಾಖಲೆಗಳನ್ನು ಪರಿಶೀಲಿಸಿದಾಗ ಅದು ಸುಳ್ಳು ದಾಖಲೆ ಪತ್ರಗಳು ಎಂಬುದು ಸಾಬೀತಾಗಿದೆ. ಅ ಬಳಿಕ ಪೋಷಕರಿಗೆ ಕಾನೂನಿನ ಅಡಿಯಲ್ಲಿ ಬರುವ ವಿಚಾರಗಳನ್ನು ಮನವರಿಕೆ ಮಾಡಿದ ಅಧಿಕಾರಿಗಳು ಮದುವೆ ನಿಲ್ಲಿಸುವಂತೆ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಲು ಸೂಚನೆ ನೀಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು