ಮಂಗಳೂರು

ಬಂಟ್ವಾಳ: ಅಪ್ರಾಪ್ತ ಬಾಲಕನ ಮದುವೆ ನಿಲ್ಲಿಸಿದ ಅಧಿಕಾರಿಗಳು

ಬಂಟ್ವಾಳ: ಅಪ್ರಾಪ್ತ ಬಾಲಕನೋರ್ವನಿಗೆ ಮದುವೆಗೆ ಸಿದ್ದತೆಯಲ್ಲಿರುವ ವೇಳೆ ಅಧಿಕಾರಿಗಳು ದಾಳಿ ನಡೆಸಿದ ಮದುವೆ ನಡೆಸದಂತೆ ಮುಚ್ಚಳಿಕೆ ಬರೆಸಿದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರ್ ಗ್ರಾಮದಲ್ಲಿ ನಡೆದಿದೆ.

ತೆಂಕಕಜೆಕಾರ್ ಗ್ರಾಮದ ಮಿತ್ತಳಿಕೆ ಎಂಬ ಮನೆಯಲ್ಲಿ ಅಪ್ರಾಪ್ತ ಬಾಲಕನೋರ್ವನಿಗೆ ನಾಳೆ ಮಾ.5 ರಂದು ಮದುವೆಯ ಸಕಲಸಿದ್ಧತೆಗಳನ್ನು ನಡೆದಿದ್ದು, ಅಧಿಕಾರಿಗಳಿಗೆ ದೊರೆತ ಮಾಹಿತಿಯಂತೆ ಮನೆಗೆ ಧಾವಿಸಿ, ಮದುವೆ ನಡೆಸದಂತೆ ಮನೆಯವರಿಂದ ಮುಚ್ಚಳಿಕೆ ಬರೆಸಿಕೊಂಡಿದ್ದಾರೆ.

ಎರಡನೇ ಬಾರಿ ಮದುವೆಗೆ ಯತ್ನ: ಈ ಅಪ್ರಾಪ್ತ ಬಾಲಕನಿಗೆ ತಪ್ಪಿದ ಎರಡನೇಯ ಮದುವೆ. ಕಳೆದ ವರ್ಷ ಈತನಿಗೆ ಇದೇ ರೀತಿ ಮದುವೆಗಾಗಿ ಸಕಲ ಸಿದ್ದತೆಗಳು ನಡೆದಿದ್ದು, ಈ ಬಗ್ಗೆ ಮಾಹಿತಿ ತಿಳಿದ ಅಧಿಕಾರಿಗಳು ಮನೆಗೆ ಹೋಗಿ ವಿಚಾರ ತಿಳಿಸಿ ಮದುವೆಯನ್ನು ನಿಲ್ಲಿಸಿದ್ದರು. ಇದೀಗ ಎರಡನೇ ಬಾರಿ ಅದೇ ರೀತಿ ಅಪ್ರಾಪ್ತ ಬಾಲಕನಿಗೆ ಮತ್ತೆ ಮದುವೆಗಾಗಿ ತಯಾರಿಯಲ್ಲಿದ್ದರು.  ಈ ಬಗ್ಗೆ ಮಾಹಿತಿ ತಿಳಿದ ಬಂಟ್ವಾಳ ಸಿ.ಡಿ.ಪಿ.ಒ‌‌.ಗಾಯತ್ರಿ ಕಂಬಳಿ ಅವರು ಪುಂಜಾಲಕಟ್ಟೆ ಎಸ್.ಐ.ಆಂಜನೇಯ ರೆಡ್ಡಿ ಹಾಗೂ ಸಿ.ಡಿ.ಪಿ.ಒ. ಇಲಾಖೆಯ ಇತರ ಅಧಿಕಾರಿಗಳೊಂದಿಗೆ ಮನೆಗೆ ತೆರಳಿ ಮದುವೆ ನಿಲ್ಲಿಸಿದ್ದಾರೆ.

ಸುಳ್ಳು ಸರ್ಟಿಫಿಕೇಟ್: ಕಳೆದ ಬಾರಿ ಅಪ್ರಾಪ್ತ ಬಾಲಕನಿಗೆ ಮದುವೆ ಮಾಡಲು ಅಧಿಕಾರಿಗಳು ಅವಕಾಶ ನೀಡಿಲ್ಲ ಎಂಬ ಕಾರಣಕ್ಕಾಗಿ ಪೋರ್ಜರಿ ಬರ್ತ್ ಸರ್ಟೀಪಿಕೇಟ್ ಸೃಷ್ಟಿಸಿ ಸ್ಥಳಕ್ಕೆ ಬಂದ ಅಧಿಕಾರಿಗಳ ಕಣ್ಣಿಗೆ ಮಣ್ಣೆರಚಲು ನೋಡಿದ್ದಾರೆ. ಆದರೆ ಅಧಿಕಾರಿಗಳು ಇವರು ನೀಡಿದ ದಾಖಲೆಗಳನ್ನು ಪರಿಶೀಲಿಸಿದಾಗ ಅದು ಸುಳ್ಳು ದಾಖಲೆ ಪತ್ರಗಳು ಎಂಬುದು ಸಾಬೀತಾಗಿದೆ. ಅ ಬಳಿಕ ಪೋಷಕರಿಗೆ ಕಾನೂನಿನ ಅಡಿಯಲ್ಲಿ ಬರುವ ವಿಚಾರಗಳನ್ನು ಮನವರಿಕೆ ಮಾಡಿದ ಅಧಿಕಾರಿಗಳು ಮದುವೆ ನಿಲ್ಲಿಸುವಂತೆ ಮುಚ್ಚಳಿಕೆ ಬರೆಸಿಕೊಂಡು ಮದುವೆ ನಿಲ್ಲಿಸಲು ಸೂಚನೆ ನೀಡಿದ್ದಾರೆ.

Ashika S

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

9 hours ago