News Karnataka Kannada
Sunday, April 28 2024
ಮಂಗಳೂರು

ಬಂಟ್ವಾಳ: ಧಾರಾಕಾರ ಮಳೆಗೆ ಶೆಡ್ ಮೇಲೆ ಗುಡ್ಡ ಜರಿದು ಓರ್ವ ಸಾವು

Puttur: Bengaluru man found dead in Puttur lodge
Photo Credit :

ಬಂಟ್ವಾಳ: ಧಾರಾಕಾರ ಮಳೆಗೆ ಪಂಜಿಕಲ್ಲು ಸಮೀಪ ನೇಲ್ಯಪಲ್ಕೆ ಸಮೀಪ ಕಜೆಬೈಲು ಎಂಬಲ್ಲಿ ಭೂಕುಸಿತವಾದ ಘಟನೆ ಬುಧವಾರ ರಾತ್ರಿ ನಡೆದಿದೆ. ಈ ವೇಳೆ ಹೆನ್ರಿ ಕಾರ್ಲೊ ಎಂಬವರ ಮನೆಯ ರಬ್ಬರ್ ತೋಟದಲ್ಲಿ ಕೆಲಸ ಮಾಡುತ್ತಿದ್ದ ಐವರ ಪೈಕಿ ನಾಲ್ವರು ಗುಡ್ಡ ಜರಿದು ಶೆಡ್ ನೊಳಗೆ ಸಿಲುಕಿಕೊಂಡಿದ್ದರು, ಅದರಲ್ಲಿ ಇಬ್ಬರನ್ನು ಜೆಸಿಬಿ ಮೂಲಕ ರಕ್ಷಣೆ ಮಾಡಿದರೆ ಓರ್ವ ಮೃತಪಟ್ಟಿದ್ದಾನೆ, ಇನ್ನೋರ್ವನನ್ನು ಮೇಲಕ್ಕೆ ತೆಗೆಯಲು ಕಾರ್ಯಚರಣೆ ಮುಂದುವರಿದಿದೆ.

ಪಾಲಕ್ಕಾಡು ನಿವಾಸಿ ವಿಜು (46) ಮೃತಪಟ್ಟ ದುರ್ದೈವಿ. ಉಳಿದಂತೆ ಕೊಟ್ಟಾಯಂ ನಿವಾಸಿ ಬಾಬು (46) ಎಂಬವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರೆ , ಕಣ್ಣೂರು ನಿವಾಸಿ ಜಾನ್ (44)ಎಂಬಾತ ಬಂಟ್ವಾಳ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಶೆಡ್ ನ ಶೌಚಾಲಯದ ಸಮೀಪ ಸಿಲುಕಿಕೊಂಡಿರುವ ಸಂತೋಷ್ ಅಲ್ಫೊನ್ಸ್ ಮಣ್ಣಿನಿಂದ ಹೊರತೆಗೆಯುವ ಕಾರ್ಯಚರಣೆ ಮುಂದುವರಿದಿದೆ.

ಕಾರ್ಯ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಶಾಸಕ ರಾಜೇಶ್ ನಾಯ್ಕ್ ಅವರು ಜಿಲ್ಲಾಧಿಕಾರಿ ಹಾಗೂ‌ ತಹಶೀಲ್ದಾರ್ ಅವರನ್ನು ಬೆಂಗಳೂರಿನಿಂದಲೇ ದೂರವಾಣಿ ಮೂಲಕ ಸಂಪರ್ಕಿಸಿ ರಕ್ಷಣಾ ಕಾರ್ಯಚರಣೆಗೆ ನಿರ್ದೇಶನ‌ ನೀಡಿದ್ದಾರೆ.
ನಾಳೆ ಬೆಳಿಗ್ಗೆ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಜೊತೆ ಘಟನಾ ಸ್ಥಳಕ್ಕೆ ಬೇಟಿ ನೀಡುವುದಾಗಿ ಅವರು ಮಾಧ್ಯಮಕ್ಕೆ
ತಿಳಿಸಿದ್ದಾರೆ.

ಡಿ.ಸಿ., ಎಸ್.ಪಿ.ಸಹಿತ ಉನ್ನತ ಮಟ್ಟದ ಅಧಿಕಾರಿಗಳು ಸ್ಥಳದಲ್ಲಿ
ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಡಾ! ಕೆ.ವಿ.ರಾಜೇಂದ್ರ, ಎಸ್.ಪಿ.ಹೃಷಿಕೇಶ್ ಸೋನಾವಣೆ, ಮಂಗಳೂರು ಸಹಾಯಕ‌ ಆಯುಕ್ತ ಮದನ್ ಮೋಹನ್, ತಹಶೀಲ್ದಾರ್ ಸ್ಮಿತಾರಾಮು, ಪಿ.ಡಿ.ಒ.ವಿದ್ಯಾಶಿವಾನಂದ, ಪೋಲಿಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ಎಸ್.ಐ.ಹರೀಶ್, ಕಂದಾಯ ನಿರೀಕ್ಷಕ ಸಂತೋಷ್, ಗ್ರಾಮ ಕರಣೀಕ ಕುಮಾರ್, ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ, ಸದಸ್ಯರಾದ ಮೋಹನ್ ದಾಸ್ , ಬಾಲಕೃಷ್ಣ ಪೂಜಾರಿ, ಸ್ಥಳೀಯ ಪ್ರಮುಖರಾದ ಸುದರ್ಶನ್, ಪಿಯೂಸ್ ಎಲ್.ರೋಡ್ರಿಗಸ್, ಬೇಬಿಕುಂದರ್, ಸುರೇಶ್ ಜೋರಾ ಮತ್ತಿತರರು ಬೇಟಿ ರಕ್ಷಣಾ ಕಾರ್ಯಚರಣೆಗೆ ಸಹಕರಿಸಿದರು.

ಬಂಟ್ವಾಳ ಅಗ್ನಿಶಾಮಕ ದಳ ಹಾಗೂ ಎನ್‌‌ಡಿ.ಆರ್.ಎಫ್ ಮತ್ತು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಚರಣೆ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು