News Karnataka Kannada
Sunday, May 05 2024
ಮಂಗಳೂರು

ಬಂಟ್ವಾಳ: ಕೆಎಸ್ಆರ್ ಟಿಸಿ ಬಸ್ ಬೈಕ್ ನಡುವೆ ಡಿಕ್ಕಿ, ಓರ್ವ ಸಾವು

One killed as KSRTC bus collides with bike
Photo Credit : By Author

ಬಂಟ್ವಾಳ: ಕೆಎಸ್ಆರ್ ಟಿಸಿ ಬಸ್ ಬೈಕ್ ಗೆ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.

ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್ (30) ಮೃತಪಟ್ಟಿದ್ದಾನೆ.

ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದ ಯುವಕನಾಗಿದ್ದು, ಸಂಜೆ ವೇಳೆ ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ.

ಬಿಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ ಕಡೆಯಿಂದ ವೇಗವಾಗಿ ಬರುತ್ತಿದ್ದ ಸರಕಾರಿ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬೈಕಿಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ಬೈಕ್ ಸಂಪೂರ್ಣ ಜಖಂಗೊಂಡಿದ್ದು,ಯುವಕ ಗಂಭೀರವಾಗಿ ಗಾಯಗೊಂಡಿದ್ದ, ಅಪಘಾತಕ್ಕೆ ಒಳಗಾದ ಸ್ಥಳದಲ್ಲಿ ರಕ್ತದೋಕುಳಿ ಹರಿದಿತ್ತು. ಕೂಡಲೇ ಈತನನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಕೊಂಡು ಹೋಗಿದ್ದರು ,ಆದರೆ ಗಂಭೀರವಾಗಿ ಗಾಯಗೊಂಡಿದ್ದ ಈತನನ್ನು 108 ಅಂಬ್ಯುಲೆನ್ಸ್ ವಾಹನದಲ್ಲಿ ಮಂಗಳೂರಿಗೆ ಸಾಗಿಸಲಾಯಿತು ಆದರೂ ದಾರಿ ಮಧ್ಯೆ ಈತ ಕೊನೆಯುಸಿರೆಳೆದಿದ್ದಾನೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ಮೂರ್ತಿ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು