News Karnataka Kannada
Monday, May 06 2024
ಮಂಗಳೂರು

ಬಂಟ್ವಾಳ: ಗ್ರಾಮ ವಾಸ್ತವ್ಯದ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದ ಡಾ. ಸ್ಮಿತಾ ರಾಮು

eople should take advantage of their village stay, said Dr. B.S. Smita Ramu
Photo Credit : By Author

ಬಂಟ್ವಾಳ: ಗ್ರಾಮಸ್ಥರು ತಮ್ಮ ಸಮಸ್ಯೆಗಳನ್ನು ನೇರವಾಗಿ ಅಧಿಕಾರಿಗಳ ಮುಂದೆ ಹೇಳಿಕೊಳ್ಳಲು ಗ್ರಾಮವಾಸ್ತವ್ಯ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದ್ದು ಇದರ ಸದುಪಯೋಗವನ್ನು ಜನತೆ ಪಡೆದುಕೊಳ್ಳಬೇಕು ಎಂದು ಬಂಟ್ವಾಳ ತಹಸೀಲ್ದಾರ್ ಡಾ. ಸ್ಮಿತಾ ರಾಮು ಹೇಳಿದರು.

ಮಾಣಿ ಸಮೀಪ ಪೆರಾಜೆ ಗ್ರಾಮದ ದ.ಕ.ಜಿಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ಗ್ರಾಮವಾಸ್ತವ್ಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರಕಾರಿ ಸವಲತ್ತುಗಳನ್ನು ಹೇಗೆ ಪಡೆಯಬೇಕು ಎಂಬ ಅರಿವು ಬಹಳಷ್ಟು ಜನರಿಗೆ ಇರುವುದಿಲ್ಲ. ಕೆಲವೊಮ್ಮೆ ದಾಖಲೆಗಳ ಕೊರತೆಯಿಂದಾಗಿ ಕಚೇರಿಗಳಿಗೆ ಬಂದು ವಾಪಸ್ ಹೋಗುವ ಪರಿಸ್ಥಿತಿ ಇರುತ್ತದೆ. ಈ ಹಿನ್ನೆಲೆಯಲ್ಲಿ ಗ್ರಾಮವಾಸ್ತವ್ಯ ಕಾರ್ಯಕ್ರಮ ಏರ್ಪಡಿಸುವ ಮೂಲಕ ಇಲಾಖೆ ಜನರ ಸಮಸ್ಯೆಗಳನ್ನು ಆಲಿಸುವುದರ ಜೊತೆಗೆ ಪೂರಕ ಮಾಹಿತಿಗಳನ್ನು ನೀಡುವ ಕಾರ್ಯವನ್ನು ಮಾಡುತ್ತದೆ ಎಂದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೋಹಿಣಿ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ, ಶಿಶು ಅಭಿವೃದ್ಧಿ ಯೋಜನೆ ಅಧಿಕಾರಿ ಉಷಾ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುನಿಲ್ ಕುಮಾರ್, ಉಪತಹಸೀಲ್ದಾರ್ ಗಳಾದ ನವೀನ್ ಕುಮಾರ್, ವಿಜಯ ವಿಕ್ರಮ, ಗ್ರೆಟ್ಟಾ, ನರೇಂದ್ರನಾಥ್ ಮಿತ್ತೂರು ಉಪಸ್ಥಿತರಿದ್ದರು. ಗ್ರಾಮಕರಣಿಕರಾದ ವೈಶಾಲಿ ಸ್ವಾಗತಿಸಿದರು. ಕೃತಿಕಾ ವಂದಿಸಿದರು.

ಮಾಣಿ,ಪೆರಾಜೆ ಗ್ರಾಮದ ಗ್ರಾಮಕರಣಿಕರಾದ ಅನಿಲ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಗ್ರಾಮವಾಸ್ತವ್ಯದಲ್ಲಿ ಒಟ್ಟು 44 ಅರ್ಜಿ ಸ್ವೀಕಾರವಾಗಿದ್ದು, 16 ಅರ್ಜಿಗಳು ವಿಲೇವಾರಿ ಆಗಿರುತ್ತದೆ. ಮಧ್ಯಾಹ್ನದ ನಂತರ ಮಾನ್ಯ ತಹಶೀಲ್ದಾರ್ ರವರು ಪೆರಾಜೆ ಗ್ರಾಮದ ಮಡಲ ಪರಿಶಿಷ್ಟ ಜಾತಿ ಕಾಲೋನಿ, ಸಾದಿಕುಕ್ಕು ಮತ್ತು ಮಡಲ ಅಂಗನವಾಡಿ ಕೇಂದ್ರ ಹಾಗೂ 94ಸಿ ಸ್ಥಳ ಭೇಟಿ ನೀಡಿ ಪರಿಶೀಲಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು