News Karnataka Kannada
Friday, May 03 2024
ಮಂಗಳೂರು

ಬಂಟ್ವಾಳ: ಶಾಂತಿ ಕಾಪಾಡುವ ನಿಟ್ಟಿನಲ್ಲಿ ಕೇರಳದ ಗಡಿಭಾಗದಲ್ಲಿ ಪೊಲೀಸರಿಂದ ತಪಾಸಣೆ

Police inspect Kerala border to maintain peace
Photo Credit : By Author
ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ ಉಂಟಾಗಿರುವ ಅಹಿತಕರ ಘಟನೆಗಳನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹರಸಾಹಸ ಪಡುತ್ತಿದ್ದು, ಜಿಲ್ಲೆಯ ಕೇರಳದ ಗಡಿಭಾಗದ ಜತೆಗೆ ಕೆಲವೊಂದು ಆಯಕಟ್ಟಿನ ಸ್ಥಳಗಳಲ್ಲೂ ದಿನದ ೨೪ ಗಂಟೆಯೂ ತಪಾಸಣೆ ಮುಂದುವರಿಸಿದೆ.
ಪೊಲೀಸ್ ಅಧಿಕಾರಿ ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ ಬಂಟ್ವಾಳದ ಹಲವು ಭಾಗಗಳಲ್ಲಿ ತಪಾಸಣೆ ನಡೆಯುತ್ತಿದ್ದು, ಪೊಳಲಿ, ಫರಂಗಿಪೇಟೆ, ಮಣಿಹಳ್ಳ ಮೊದಲಾದ ಪ್ರದೇಶಗಳ ಜತೆಗೆ ಗಡಿ ಸಮೀಪದ ಗ್ರಾಮಗಳಾದ ಮಂಚಿ, ಸಾಲೆತ್ತೂರುಗಳಲ್ಲೂ ತಪಾಸಣೆ ಮುಂದುವರಿದಿದೆ.
ಜತೆಗೆ ಉನ್ನತ ಅಧಿಕಾರಿಗಳು ಸೇರಿದಂತೆ ಇನ್ಸ್‌ಪೆಕ್ಟರ್ ಗಳು, ಪಿಎಸ್ಐಗಳ ರೌಂಡ್ಸ್ ಕರ್ತವ್ಯದ ಮೂಲಕ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತಂದು ಜಿಲ್ಲೆಯಲ್ಲಿ ಶಾಂತಿ ನೆಲೆಸುವ ನಿಟ್ಟಿನಲ್ಲಿ ಕರ್ತವ್ಯ ನಿರತರಾಗಿದ್ದಾರೆ.
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು