News Karnataka Kannada
Monday, April 29 2024
ಮಂಗಳೂರು

ಹತ್ಯೆ ಆರೋಪಿಗಳೊಂದಿಗೆ ತಿರುಗಾಟ ಮಾಡಿದವರು ಯಾರು: ಬಿ.ರಮಾನಾಥ ರೈ ಪ್ರಶ್ನೆ

Bantwal Prajadhvani Yatra to begin from March 10: B Ramanath Rai
Photo Credit : News Kannada

ಬಂಟ್ವಾಳ: ಕಾಂಗ್ರೆಸ್ ಪಕ್ಷದ ವತಿಯಿಂದ ಬಂಟ್ವಾಳ ಕ್ಷೇತ್ರದಾದ್ಯಂತ ಗ್ರಾಮಗಳನ್ನು ತಲುಪುವ “ಬಂಟ್ವಾಳ ಪ್ರಜಾಧ್ವನಿ ಯಾತ್ರೆ” ಮಾರ್ಚ್ 10ರಿಂದ ಆರಂಭಗೊಳ್ಳಲಿದ್ದು, 14 ದಿನಗಳ ಕಾಲ ಕ್ಷೇತ್ರದಾದ್ಯಂತ ಸಂಚರಿಸಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ನ ಅಧಿಕಾರವಧಿಯ ಐದು ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸಿದ್ಧರಾಮಯ್ಯ ಸರಕಾರ ಮೂಲಕ ಕ್ಷೇತ್ರದಾದ್ಯಂತ ಕೈಗೊಳ್ಳಲಾದ 5 ಸಾವಿರ ಕೋಟಿ ರೂಗಳ ಪ್ರಗತಿಕಾರ್ಯಗಳನ್ನು ಜನರಿಗೆ ತಿಳಿಸುವ ಕಾರ್ಯವನ್ನು ಯಾತ್ರೆ ಮೂಲಕ ಮಾಡಲಾಗುವುದು. ಒಂದೇ ದಿನ ಮೂರು ಗ್ರಾಮ ಪಂಚಾಯಿತಿಗಳನ್ನು ಒಳಗೊಂಡು ಯಾತ್ರೆಯನ್ನು ನಡೆಸಲಾಗುವುದು. ಪ್ರತಿ ದಿನ ಸಂಜೆ ಪಕ್ಷದ ಜಿಲ್ಲೆ, ರಾಜ್ಯದ ಪ್ರಮುಖ ನಾಯಕರ ಉಪಸ್ಥಿತಿಯಲ್ಲಿ ಸಾರ್ವಜನಿಕ ಸಭೆ ನಡೆಸಲಾಗುತ್ತದೆ. ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಯಾತ್ರೆ ಆರಂಭಗೊಳ್ಳಲಿದೆ.

ಇನ್ನೊಬ್ಬರು ಮಾಡಿದ್ದನ್ನು ಹೇಳೋದಿಲ್ಲ:
ಇನ್ನೊಬ್ಬರು ಮಾಡಿದ ಕೆಲಸವನ್ನು ನಾನು ಮಾಡಿದ್ದು ಎಂದು ಎಲ್ಲೂ ಹೇಳುವುದಿಲ್ಲ ಎಂದು ಹೇಳಿದ ರಮಾನಾಥ ರೈ, ಬಂಟ್ವಾಳದ ಒಳಚರಂಡಿ ಯೋಜನೆ ಮಂಜೂರಾತಿಯನ್ನು 2017ರ ಅಕ್ಟೋಬರ್ 10ರಂದು ನಾನು ಮಾಡಿಸಿದ್ದೇನೆ. ಇದಕ್ಕೆ ಸಂಬಂಧಿಸಿದ ದಾಖಲೆಗಳು ನನ್ನಲ್ಲಿ ಇದೆ. ಆದರೆ ಆರು ವರ್ಷಗಳಾದರೂ ಕೆಲಸವಾಗಿಲ್ಲ ಎಂದು ಹೇಳಿದರು. ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತನ್ನ ಅವಧಿಯಲ್ಲಿ ಆಗಿದ್ದು ಎಂದು ನೆನಪಿಸಿದ ಅವರು, ಬಂಟ್ವಾಳ ತಾಲೂಕಿನ ಹೆಮ್ಮೆ ಎನಿಸಿದ ಪಂಜೆ ಮಂಗೇಶರಾಯರ ಸ್ಮಾರಕ ಭವನ ನಿರ್ಮಾಣಕ್ಕೆ ಎಂಟು ಕೋಟಿಗಳನ್ನು ,ಅಂಬೇಡ್ಕರ್ ಭವನಕ್ಕೂ ಮೂರು ಕೋಟಿ ಮಂಜೂರುಗೊಳಿಸಿ ಕೆಲಸ ಆರಂಭಿಸಲಾಗಿತ್ತು. ಇದುವರೆಗೂ ಈಗಿನ ಶಾಸಕರ ಅವಧಿಯಲ್ಲಿ ಮುಗಿಸಿಲ್ಲ ಎಂದರು.

ಈಗ ಬಂಟ್ವಾಳ ಶಾಂತಿಯುತವಾಗಿದೆ ಎನ್ನುತ್ತಾರೆ. ಹಿಂದೆ ಮತೀಯ ಹೆಸರಲ್ಲಿ ಹತ್ಯೆಯನ್ನು ಕಾಂಗ್ರೆಸ್ ಮಾಡಿರಲಿಲ್ಲ. ಹತ್ಯೆ ಆರೋಪಿಗಳೊಂದಿಗೆ ತಿರುಗಾಟ ಮಾಡಿದವರು ಯಾರು ಎಂದು ಪ್ರಶ್ನಿಸಿದ ರೈ, ಮರಳು ಮಾಫಿಯಾ, ಇಸ್ಪೀಟ್ ಕ್ಲಬ್ ನವರ ಬ್ಯಾನರ್ ಕಟೌಟ್ ಗಳು ಈಗ ರಾರಾಜಿಸುತ್ತಿವೆ ಎಂದರು.

ಯಾತ್ರೆ ಕುರಿತು ಮುಖಂಡ ಪಿಯೂಸ್ ಎಲ್. ರೋಡ್ರಿಗಸ್ ಮಾಹಿತಿ ನೀಡಿದರು. ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಸುದೀಪ್ ಕುಮಾರ್ ಶೆಟ್ಟಿ, ಬೇಬಿ ಕುಂದರ್, ಪದ್ಮಪ್ರಸಾದ್ ಜೈನ್, ಸುದರ್ಶನ ಜೈನ್, ಮಧುಸೂಧನ ಶೆಣೈ, ಅಬ್ಬಾಸ್ ಆಲಿ ಬಿ.ಎಂ., ಮಾಯಿಲಪ್ಪ ಸಾಲಿಯಾನ್. ಸುರೇಶ್ ಜೋರ, ಚಂದ್ರಶೇಖರ ಪೂಜಾರಿ, ಚಂದ್ರಶೇಖರ ಭಂಡಾರಿ, ಸುಧಾಕರ ಶೆಣೈ ಖಂಡಿಗ ಮೊದಲಾದವರು ಉಪಸ್ಥಿತರಿದ್ದರು

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು