ಬಂಟ್ವಾಳ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರಹಾಕಲು ಶಿಕ್ಷಣ ಇಲಾಖೆಯ ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಉತ್ತಮವಾದ ಅವಕಾಶವನ್ನು ಕಲ್ಪಿಸಿಕೊಡುತ್ತವೆ ಎಂದು ಮಾಣಿ ಪ್ರೌಢಶಾಲಾ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಕಿರಣ್ ಹೆಗ್ಡೆ ಹೇಳಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬಂಟ್ವಾಳ, ಸಮೂಹ ಸಂಪನ್ಮೂಲ ಕೇಂದ್ರ ಬಂಟ್ವಾಳ ವಿದ್ಯಾಭಿವರ್ಧಕ ಸಂಘ (ರಿ) ಮಾಣಿ, ಕರ್ನಾಟಕ ಪ್ರೌಢಶಾಲೆ ಮತ್ತು ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆ ಮಾಣಿ ,ರೋಟರಿ ಕ್ಲಬ್ ಮಾಣಿ , ಲಯನ್ಸ್ ಕ್ಲಬ್ ಮಾಣಿ ,ಇದರ ಆಶ್ರಯದಲ್ಲಿ ಮಾಣಿಯ ಕರ್ನಾಟಕ ಪ್ರೌಢಶಾಲೆ ಮಾಣಿ ಯಲ್ಲಿ ನಡೆದ ಕಲ್ಲಡ್ಕ ವಲಯ ಮಟ್ಟದ ಪ್ರತಿಬಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಉಧ್ಘಾಟಿಸಿ ಅವರು ಮಾತನಾಡಿದರು.
ರೋಟರಿ ಕ್ಲಬ್ ಬಂಟ್ವಾಳ ಇದರ ಅಧ್ಯಕ್ಷರಾದ ರೊಟೋರಿಯನ್ ಪುಷ್ಪರಾಜ್ ಹೆಗ್ಡೆಯವರು ಮಾತನಾಡಿ, ಮಕ್ಕಳ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ಪ್ರಮುಖ ವಹಿಸುತ್ತವೆ ಎಂದರು.
ಶಿಕ್ಷಣ ಸಂಯೋಜಕಿ ಸುಜಾತ ಕುಮಾರಿಯವರು ಮಾತನಾಡಿ, ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸುವ ಗುಣ ಮಕ್ಕಳಲ್ಲಿ ಬೆಳೆಸಬೇಕು ಎಂದರು. ಮಾಣಿ ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಬರಿಮಾರು,ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಪ್ರತಿಭಾ, ಸುಧಾ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಮೆಡಿಲ್ಡಾ ಲೋಬೋ,, ಸುಧಾಕರ ಭಟ್, ಸತೀಶ್ ರಾವ್, ಮಾಣಿ ಲಯನ್ಸ್ ಕ್ಲಬ್ಬಿನ ಸ್ಥಾಪಕ ಅಧ್ಯಕ್ಷರಾದ ಗಂಗಾಧರ್ ರೈ ,ಶಾಲಾ ಸಂಚಾಲಕ ಇಬ್ರಾಹಿಂ ಕೆ, ಉಪಾಧ್ಯಕ್ಷ ಮಹಮ್ಮದ್ ಅಬೀಬ್, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಜತ್ತಪ್ಪ ಗೌಡ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ರೇಷ್ಮಾ, ಆಂಗ್ಲ ಮಾಧ್ಯಮ ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಸಾರಿಕಾ ಮೊದಲಾದವರು ಉಪಸ್ಥಿತರಿದ್ದರು.
ಪ್ರೌಢಶಾಲಾ ಮುಖ್ಯ ಶಿಕ್ಷಕ ವಿ ಕೆ ಬಂಡಾರಿ ಸ್ವಾಗತಿಸಿ, ಹಿರಿಯ ಶಿಕ್ಷಕ ಬಾಲಕೃಷ್ಣ ಧನ್ಯವಾದವಿತರು. ಜಯರಾಮ್ ಕಾಂಚನ ಕಾರ್ಯಕ್ರಮ ನಿರೂಪಿಸಿದರು ಪ್ರತಿಭಾ ಕಾರಂಜಿಯಲ್ಲಿ ಕಲ್ಲಡ್ಕ ವಲಯ ಮಟ್ಟದ 12 ಪ್ರೌಢಶಾಲೆ ಹಾಗೂ 13 ಉನ್ನತಿಕರಿಸಿದ ಶಾಲಾ ಮಕ್ಕಳು ಭಾಗವಹಿಸಿದ್ದರು.