Categories: ಮಂಗಳೂರು

ಬಂಟ್ವಾಳ: ಅಂಗನವಾಡಿಗಳ ಸ್ಥಿತಿಗತಿ ಅವಲೋಕಿಸಲು ಅಂಗನವಾಡಿಗಳಿಗೆ ತೆರಳಿದ ರಮಾನಾಥ ರೈ

ಬಂಟ್ವಾಳ: ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಅಂಗನವಾಡಿಗಳ ಸ್ಥಿತಿಗತಿ ಅವಲೋಕಿಸಲು ಅಂಗನವಾಡಿಗಳಿಗೆ ತೆರಳಿ ಅಲ್ಲಿ ಮಕ್ಕಳಿಗೆ ನೀಡಲಾಗುವ ಅಕ್ಕಿಯಲ್ಲಿ ಹರಿದಾಡುವ ಜೀವಂತ ಹುಳಗಳನ್ನು ನಾನೇ ಕಣ್ಣಾರೆ ಕಂಡಿದ್ದೇನೆ, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಗೆ ಸರಿಪಡಿಸುವಂತೆ ಮಾಡಲಾದ ಆಗ್ರಹಕ್ಕೆ ಪ್ರತಿಯಾಗಿ ಅಧಿಕಾರಿಗಳು ಯಾವುದೇ ಪರಿಶೀಲನೆ ನಡೆಸದೆ ತಕ್ಷಣ ಅಂತಹ ಯಾವುದೇ ಘಟನೆಗಳೇ ಆಗಿಲ್ಲ ಎಂಬಂತೆ ವರದಿ ನೀಡುತ್ತಿರುವುದು ಸರಿಯಲ್ಲ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಹೇಳಿದ್ದಾರೆ.

ಬಿ ಸಿ ರೋಡಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಕ್ಕಳಿಗೆ ಪೌಷ್ಟಿಕಾಂಶ ಕೊಡಬೇಕಾದ ಕೇಂದ್ರಗಳು ರೋಗ ವಿತರಣಾ ಕೇಂದ್ರಗಳಾಗುತ್ತಿವೆ. ಇದು ಗಂಭೀರ ವಿಚಾರವಾಗಿದ್ದು, ಅಂಗನವಾಡಿಗಳ ಮೂಲಕ ಸರಕಾರ ಭವಿಷ್ಯದ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಲು ಪೌಷ್ಟಿಕ ಆಹಾರಗಳನ್ನು ಪೂರೈಸುವ ಜವಾಬ್ದಾರಿ ವಹಿಸಿಕೊಂಡಿದೆ. ಆದರೆ ಬಂಟ್ವಾಳ ಕ್ಷೇತ್ರದ ಅಂಗನವಾಡಿಗಳಲ್ಲಿ ಮಕ್ಕಳಿಗೆ ಪೂರೈಕೆಯಾಗುವ ಪೌಷ್ಠಿಕ ಆಹಾರಗಳಲ್ಲಿ ಜೀವಂತ ಹುಳಗಳು ಹರಿದಾಡುತ್ತಿರುವುದನ್ನು ನಾನು ಪರಿಶೀಲನೆ ವೇಳೆ ಕಣ್ಣಾರೆ ಕಂಡುಕೊಂಡಿದ್ದೇನೆ.

ಅಕ್ಕಿಯಲ್ಲಿ ಹರಿದಾಡುವ ಹುಳಗಳನ್ನು ನೋಡುವ ದೌರ್ಭಾಗ್ಯ ಮಕ್ಕಳದ್ದಾಗಿದೆ. ಅಲ್ಲಿನ ಪರಿಸ್ಥಿತಿಯ ಬಗ್ಗೆ ಕಳಪೆ ಆಹಾರಗಳ ಬಗ್ಗೆ ಮೊಬೈಲ್ ಚಿತ್ರೀಕರಣದ ಮೂಲಕ ಚಿತ್ರೀಕರಿಸಿ ಈ ಬಗ್ಗೆ ಸ್ವತಃ ನಾನೇ ಆಹಾರ ಇಲಾಖೆಯ ಜಿಲ್ಲಾ ನಿರ್ದೇಶಕರ ಗಮನಕ್ಕೂ ತಂದಿದ್ದೇನೆ.ಮಾಧ್ಯಮಗಳ ಮಂದಿಯ ಗಮನಕ್ಕೂ ತಂದಿದ್ದೇನೆ. ಆದರೂ ಸ್ಥಳೀಯ ಮಟ್ಟದ ಅಧಿಕಾರಿಗಳು ಅಂತಹ ಪ್ರಕರಣಗಳು ಗಮನಕ್ಕೂ ಬಂದಿಲ್ಲ ಎಂದು ವರದಿ ನೀಡುವುದಾದರೆ ಇದಕ್ಕಿಂತ ದೊಡ್ಡ ನಾಚಿಕಗೇಡು ಇನ್ನೊಂದಿಲ್ಲ.ನಾನೇನು ಸುಳ್ಳು ಹೇಳುತ್ತೇನೋ ಅಥವಾ ಇನ್ನೆಲ್ಲಿಂದಲೋ ಹುಳಭರಿತ ಅಕ್ಕಿಯನ್ನು ಸಂಗ್ರಹಿಸಿ ತಂದು ಹಾಜರುಪಡಿಸಿದ್ದೇನೋ ಎಂದು ಆಕ್ರೋಶ ವ್ಯಕ್ತಪಡಿಸಿದರು.

ವ್ಯವಸ್ಥೆಯ ಕುಂದು-ಕೊರತೆಗಳನ್ನು ಹೇಳುವಾಗ ಅದನ್ನು ಪರಿಶೀಲನೆ ನಡೆಸಿ ಸರಿಪಡಿಸಬೇಕಾದ ಇಲಾಖೆ, ಅಧಿಕಾರಿಗಳು ಜವಾಬ್ದಾರಿಯಿಂದ ಬೆನ್ನು ಜಾರಿಸಿ ನುಣುಚಿಕೊಳ್ಳುವುದು ಶೋಭೆಯಲ್ಲ. ಅಥವಾ ಇದಕ್ಕೆ ಸ್ಥಳೀಯ ಅಂಗನಾಡಿ ಕಾರ್ಯಕರ್ತೆಯರನ್ನು ದಬಾಯಿಸುವ ಮೂಲಕ ತಪ್ಪನ್ನು ಮುಚ್ಚಿ ಹಾಕುವ ಕೆಲಸವನ್ನೂ ಮಾಡಬಾರದು. ಅಂಗನವಾಡಿ ಪುಟಾಣಿಗಳಿಗೆ ಸಮರ್ಪಕವಾದ ಪೌಷ್ಠಿಕ ಆಹಾರ ಮುಂದಿನ ದಿನಗಳಲ್ಲಿ ಒದಗಿಸಿಕೊಡುವ ಜವಾಬ್ದಾರಿ ಇಲಾಖಾಧಿಕಾರಿಗಳು ಹಾಗೂ ಸರಕಾರದ್ದು. ಅದು ಆಗಬೇಕು ಎಂಬ ಒಳ್ಳೆಯ ಮನಸ್ಸಿನಿಂದ ಈ ಕೃತ್ಯಗಳನ್ನು ಬಯಲಿಗೆಳೆಯುವ ಕೆಲಸ ಮಾಡಿದ್ದೇನೆ ಹೊರತು ಇದರಲ್ಲಿ ಯಾವುದೇ ರಾಜಕೀಯ ಮಾಡಲು ಬಯಸುವುದಿಲ್ಲ ಎಂದ ರಮಾನಾಥ ರೈ ಈ ಬಗ್ಗೆ ಯಾವುದೇ ಅಂಗನಾಡಿ ಕಾರ್ಯಕರ್ತೆಯರ ಮೇಲೆ ಆರೋಪ ಹೊರಿಸುವುದಿಲ್ಲ.

ಅವರೆಲ್ಲರೂ ಹೊಟ್ಟೆಪಾಡಿಗಾಗಿ ಸಣ್ಣ ಸಂಬಳಕ್ಕೆ ದುಡಿಯುವವರು, ಅವರ ಹಿತ ಕಾಪಾಡುವುದೂ ಕೂಡಾ ಸರಕಾರದ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅಂಗನವಾಡಿಗಳ ಆಹಾರದಲ್ಲಿ ಹುಳ ಪ್ರಕರಣವನ್ನು ಅಂಗನಾಡಿ ಕಾರ್ಯಕರ್ತೆಯರ ತಲೆಗೆ ಕಟ್ಟಿ ಅವರ ಜೀವನದ ಜೊತೆ ಚೆಲ್ಲಾಟವಾಡುವ ಕೃತ್ಯವನ್ನು ಯಾರು ಕೂಡಾ ಮಾಡಬಾರದು. ಒಳ್ಳೆಯ ಮನಸ್ಸಿನಿಂದ ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಅಂಗನವಾಡಿ ಪುಟಾಣಿಗಳ ಹಿತ ಕಾಯುವಂತೆ ಆಗ್ರಹಿಸಿದರು.

ಈ ಸಂದರ್ಭ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಬಡಕಬೈಲು ಉಪಸ್ಥಿತರಿದ್ದರು.

Ashika S

Recent Posts

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

13 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

19 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

38 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

42 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

57 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

1 hour ago