News Karnataka Kannada
Monday, April 29 2024
ಮಂಗಳೂರು

ಬಂಟ್ವಾಳ : ಸಲಾಂ ಮಂಗಳಾರತಿ ಸೇವೆಗಳ ಹೆಸರು ಬದಲಾಯಿಸಲು ಧಾರ್ಮಿಕ ಪರಿಷತ್ತು ತೀರ್ಮಾನ

Religious Council has decided to change the name of Salaam Mangalarathi services.
Photo Credit : By Author

ಬಂಟ್ವಾಳ : ಪುತ್ತೂರು, ಸುಬ್ರಹ್ಮಣ್ಯ,ಕೊಲ್ಲೂರು ಸಹಿತ ವಿವಿಧ ದೇವಸ್ಥಾನಗಳಲ್ಲಿ ಈ ಹಿಂದೆ ಸಲಾಂ ಮಂಗಳಾರತಿ ಎಂಬ ಹೆಸರಿನಲ್ಲಿ ಸೇವೆಗಳು ನಡೆಯುತ್ತಿದ್ದು, ಅದರ ಹೆಸರು ಬದಲಾಯಿಸಲು ರಾಜ್ಯ ಧಾರ್ಮಿಕ ಪರಿಷತ್ತು ತೀರ್ಮಾನಿಸಿದೆ ಎಂದು ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್‌ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಹಿಂದೆ ಟಿಪ್ಪು ಸುಲ್ತಾನ್ ಆಳ್ವಿಕೆ ಸಂದರ್ಭ ದೇವಸ್ಥಾನಗಳಲ್ಲಿ ತನ್ನ ಆಡಳಿತಕ್ಕೆ ಒಳ್ಳೆಯದಾಗಲೆಂದು ಸಲಾಂ ಮಂಗಳಾರತಿ ಹೆಸರಲ್ಲಿ ಸೇವೆ ಮಾಡಿಸಿಕೊಳ್ಳುತ್ತಿದ್ದ. ಆ ಪದ್ಧತಿ ಹಾಗೆಯೇ ಮುಂದುವರಿಯಿತು, ಆದರೆ ಇಂದು ಕೇವಲ ರಾಜ್ಯಾಡಳಿತಕ್ಕಷ್ಟೇ ಅಲ್ಲ, ಪ್ರಜೆಗಳಿಗೂ ಒಳ್ಳೆಯದಾಗಲೆಂದು ಹಾಗೂ ಸಲಾಂ ಎಂಬುದರ ಬದಲಾಗಿ ನಮಸ್ಕಾರ ಎಂಬ ಹೆಸರನ್ನು ಇಟ್ಟುಕೊಂಡು ಆ ಸೇವೆ ನಡೆಸಲಾಗುತ್ತದೆ ಎಂದು ಭಟ್ ಹೇಳಿದರು.

ರಾಜ್ಯ ಧಾರ್ಮಿಕ ದತ್ತಿ ಇಲಾಖೆ ಅಧೀನಕ್ಕೆ ಒಳಪಟ್ಟಿ ದೇವಸ್ಥಾನಗಳಲ್ಲಿ ದಿವಟಿಗೆ, ಪಂಜು, ದೊಂದಿ ಹಿಡಿದು ದೇವಾಲಯಕ್ಕೆ ಮತ್ತು ದೇವರಿಗೆ ಆರತಿ ನಡೆಸುವ ದೀವಟಿಗೆ ಸಲಾಂ,ಸಲಾಂ ಆರತಿ ಎಂಬ ಹೆಸರಿನಲ್ಲಿ ಕರೆಯಲಾಗುತ್ತಿತ್ತು, ಸಲಾಂ ಎಂಬ ಪದವನ್ನು ತೆಗೆದು ಸಂಸ್ಕೃತ ಭಾಷೆಯ ಪದದಿಂದ ಸೇವಾ ಕಾರ್ಯಗಳನ್ನು ನಡೆಸಲು ಸೂಚಕವಾಗುವಂತೆ ಹೆಸರುಗಳನ್ನು ಸರಿಪಡಿಸಲು ಪರಿಷತ್ತಿನ ಸಭೆಯಲ್ಲಿ ಸದಸ್ಯರು ಪ್ರಸ್ತಾಪಿಸಿದ್ದರು ಅದರಂತೆ ಸಲಾಂ ಎಂಬುದರ ಪದದ ಬದಲಾಗಿ ನಮಸ್ಕಾರ ಪದವನ್ನು ಬಳಸಿ ಪೂಜೆಗಳು ಹಾಗೆಯೇ ಮುಂದುವರಿಯುತ್ತದೆ ಎಂದವರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು