News Karnataka Kannada
Tuesday, April 30 2024
ಮಂಗಳೂರು

ಮಂಗಳೂರು: ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವಧನ ಹೆಚ್ಚಿಸಲು ಮನವಿ

Education aspirant Manjunath Bhandari to become minister
Photo Credit : By Author

ಮಂಗಳೂರು: ಕಳೆದ ೨ ಅಧಿವೇಶನದಲ್ಲಿ ಪಂಚಾಯತ್ ಚುನಾಯಿತ ಪ್ರತಿನಿಧಿಗಳ ಗೌರವಧನವನ್ನು ಕನಿಷ್ಟ ಪಕ್ಷ ಮಾಹೆಯಾನ ಹತ್ತು ಸಾವಿರ ರೂಪಾಯಿ ಹೆಚ್ಚಿಸಬೇಕೆಂದು ಹಾಗು ಕೇರಳ ಮಾದರಿಯ ಆಡಳಿತವನ್ನು ಅನುಸರಿಸಬೇಕೆಂಬುದರ ಬಗ್ಗೆ ನಾನು ವಿಧಾನ ಪರಿಷತ್ತಿನಲ್ಲಿ ಸುರ್ಧೀಘವಾಗಿ ಚರ್ಚೆ ನಡೆಸಿದ್ದೆ.

ಆದರೆ ರಾಜ್ಯ ಸರ್ಕಾರವು ಇಂದು ಗೌರವಧನವನ್ನು ಕೇವಲ ರೂಪಾಯಿ ೧೦೦೦ ರಿಂದ ೨೦೦೦ ವರೆಗೆ ಹೆಚ್ಚಿಸಿದೆ. ಕೊನೆಯ ಪಕ್ಷ ೫೦೦೦ ರೂಪಾಯಿ ಹೆಚ್ಚಿಸುವರೆಂಬ ಆಶಾ ಭಾವನೆ ನನ್ನಲ್ಲಿತ್ತು. ಇದಕ್ಕೆ ಮುಖ್ಯ ಕಾರಣ ಪಂಚಾಯತ್‌ನ ಚುನಾಯಿತ ಪ್ರತಿನಿಧಿಗಳು ಗ್ರಾಮೀಣ ಪ್ರದೇಶದಲ್ಲಿ ಜನರ ಕಷ್ಟಗಳಿಗೆ ನೇರವಾಗಿ ಸ್ಪಂದಿಸುವವರಾಗಿರುತ್ತಾರೆ. ಆದರೆ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಮಿಸಲಾತಿ ಇರುವುದರಿಂದ ಮಹಿಳೆಯರು ಮತ್ತು ದುರ್ಬಲವರ್ಗದವರು ಚುನಾಯಿತ ಪ್ರತಿನಿಧಿಗಳಾಗಿದ್ದು ಅವರ ದೈನಂದಿನ ಜೀವನ ನಡೆಸಲು ಆರ್ಥಿಕವಾಗಿ ಹಿಂದುಳಿದವರಾಗಿರುತ್ತಾರೆ.

ಆದುದರಿಂದ ಕನಿಷ್ಟ ಪಕ್ಷ ೫೦೦೦ ರೂಪಾಯಿ ಗೌರವಧನವನ್ನು ಹೆಚ್ಚಿಸಿದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಈ ಚುನಾಯಿತ ಪ್ರತಿನಿಧಿಗಳು ತಮ್ಮನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಬಹುದು.

ಪಂಚಾಯತಿ ಚುನಾಯಿತ ಪ್ರತಿನಿಧಿಗಳ ಗೌರವಧನ ಹೆಚ್ಚಳದ ಬಗ್ಗೆ ನಮ್ಮ ಸಂಘಟಿತ ಹೋರಾಟವು ಇನ್ನೂ ಮುಂದುವರಿಯುತ್ತದೆ ಎಂದು ವಿಧಾನ ಪರಿಷತ್ತಿನ ಶಾಸಕರಾದ ಮಂಜುನಾಥ ಭಂಡಾರಿಯವರು ಪತ್ರಿಕಾ ಪ್ರಕಟಣೆಗೆ ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
11671
Media Release

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು