ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್( ರಿ) ವಿಟ್ಲ ಇದರ ಸ್ವಸಾಯ ಸಂಘಗಳ ಒಕ್ಕೂಟ ಕಲ್ಲಡ್ಕ ವಲಯ ಹಾಗೂ ಯೋಜನೆಯ ವಿಪತ್ತು ನಿರ್ವಹಣಾ ಶೌರ್ಯ ತಂಡ, ಕಲ್ಲಡ್ಕ ವಲಯ ಜನಜಾಗೃತಿ ವೇದಿಕೆ ನವ ಜೀವನ ಸಮಿತಿ ಇವುಗಳ ಜಂಟಿ ಆಶ್ರಯದಲ್ಲಿ ಬುಧವಾರ ಬಂಟ್ವಾಳ ತಾಲೂಕಿನ ಕಲ್ಲಡ್ಕ ಗೋಳ್ತಮಜಲು ಗ್ರಾಮದ ನೆಟ್ಲ ಶ್ರೀ ನಿಟಿಲೇಶ್ವರ ದೇವಸ್ಥಾನದಲ್ಲಿ ಶ್ರೀಸದಾಶಿವ ದೇವರಿಗೆ ಸೀಯಾಳಾಭಿಷೇಕ ನಡೆಯಿತು.
ಈ ವರ್ಷ ಉತ್ತಮ ಮಳೆ ಬಂದು ಯಾವುದೇ ಅನಾಹುತ ಆಗದೇ, ನಮ್ಮ ಇಡೀ ಗ್ರಾಮ ಸೀಮೆಗೆ ಸುಭಿಕ್ಷೆ ಸಿಗಲಿ , ಸರ್ವೇ ಜನ ಸುಖಿನೋ ಭವಂತು ಎಂಬ ಆಶಯದೊಂದಿಗೆ ಶ್ರೀ ದೇವರಿಗೆ ಬೊಂಡಾಭಿಷೇಕ ಜರಗಿತು. ನಂತರ ಅನ್ನ ಪ್ರಸಾದ ನೆರವೇರಿತು.
ಕಾರ್ಯಕ್ರಮದಲ್ಲಿ ಜನ ಜಾಗೃತಿ ವೇದಿಕೆಯ ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ, ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕಿ ಸುಗುಣಶೆಟ್ಟಿ, ಶೌರ್ಯ ವಿಪತ್ತು ತಂಡದ ಅಧ್ಯಕ್ಷ ಮಾಧವ ಸಾಲಿಯನ್ ಕುದ್ರೆಬೆಟ್ಟು, ಕಲ್ಲಡ್ಕ ವಲಯಕ್ಕೆ ಸಂಬಂಧಪಟ್ಟ ಒಕ್ಕೂಟಗಳ ಅಧ್ಯಕ್ಷರುಗಳಾದ ಸೀತಾರಾಮ್ ಶೆಟ್ಟಿ, ಶಾಂಭವಿ, ಸೀತಾ, ದಯಾನಂದ, ಒಕ್ಕೂಟಗಳ ಸೇವಾ ಪ್ರತಿನಿಧಿಗಳು, ಯೋಜನೆಯ ಸ್ವಸಹಾಯ ಗುಂಪಿನ ಸದಸ್ಯರುಗಳು, ಜನಜಾಗೃತಿ ವೇದಿಕೆಯ ಸದಸ್ಯರುಗಳು, ಶೌರ್ಯ ವಿಪತ್ತು ತಂಡದ ಸದಸ್ಯರುಗಳು ಭಾಗವಹಿಸಿದ್ದರು. ಸುಮಾರು 1500 ಸೀಯಾಳ ಅಭಿಷೇಕ ಮಾಡಲಾಯಿತು.
ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಜನರು ಹೊಡೆದು ಕೊಂದಿರುವ ಘಟನೆ ಮೇಘಾಲಯ ದ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ…
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದ ವಿಡಿಯೋ ಹಂಚುವುದು ಶಿಕ್ಷಾರ್ಹ ಅಪರಾಧವಾಗಿದೆ ಎಸ್ಐಟಿ ಮುಖ್ಯಸ್ಥ…
ಮದುವೆಯಲ್ಲಿ ಐಸ್ ಕ್ರೀಂ ಸೇವಿಸಿದ 80ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದಲ್ಲಿ ನಡೆದಿದೆ.ಸಾತನೂರು ಸರ್ಕಲ್ ಬಳಿಯ…
ಅಮೆರಿಕ ರಾಷ್ಟ್ರೀಯ ತಂಡದದಲ್ಲಿ ಏಕದಿನ ಮತ್ತು ಟ್ವೆಂಟಿ-20 ಕ್ರಿಕೆಟ್ ಪಂದ್ಯಗಳಲ್ಲಿ ಆಡಿರುವ ಕರ್ನಾಟಕದ ಮೂಡಿಗೆರೆಯ ಪ್ರತಿಭೆ ನಾಸ್ತುಷ್ ಪ್ರದೀಪ್, ಇದೇ…
ಕೇಂದ್ರ ಸಚಿವ ಭಗವಂತ ಖೂಬಾ ಅವರು ಲಿಂಗಾಯತ ಸ್ವತಂತ್ರ ಧರ್ಮ ಹೋರಾಟದ ವಿರೋಧಿಯಾಗಿದ್ದು, ಲಿಂಗಾಯತ ಧರ್ಮೀಯರು ಲೋಕಸಭೆ ಚುನಾವಣೆಯಲ್ಲಿ ಅವರನ್ನು…
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಮಗ ಎಚ್.ಡಿ.ರೇವಣ್ಣ, ಅವರ ಮೊಮ್ಮಗ ಪ್ರಜ್ವಲ್ ರೇವಣ್ಣನ ಕರ್ಮಕಾಂಡಗಳಿಂದ ರಾಜ್ಯದ ಮಾನ ಹರಾಜಾಗಿದೆ. ಸಾವಿರಾರು ಮಹಿಳೆಯರ…