Categories: ಮಂಗಳೂರು

ಬಂಟ್ವಾಳ : ಟೈಮ್ಸ್ ಬ್ಯುಸಿನೆಸ್ ಆವಾರ್ಡ್ ಪ್ರಶಸ್ತಿಗೆ ಎಸ್ಎಲ್‌ವಿ ಬುಕ್ಸ್ ಇಂಡಿಯಾ ಆಯ್ಕೆ

ಬಂಟ್ವಾಳ : ದಿ ಟೈಮ್ಸ್ ಗ್ರೂಪ್ ನಿಂದ ಕೊಡಲ್ಪಡುವ ಪ್ರತಿಷ್ಠಿತ ಟೈಮ್ಸ್ ಬ್ಯುಸಿನೆಸ್ ಆವಾರ್ಡ್ -೨೦೨೩ಕ್ಕೆ ಪ್ರಶಸ್ತಿಗೆ ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ ದಿವಾಕರ ದಾಸ್ ರವರ ಮಾಲಕತ್ವದ ಮೈಸೂರಿನ ಎಸ್ಎಲ್‌ವಿ ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ ಆಯ್ಕೆಯಾಗಿದೆ.

ಪ್ರಶಸ್ತಿಯನ್ನು ಮಾ.೧೪ರಂದು ಮೈಸೂರಿನ ಸೈಂಟ್ ಶೋರ್ ರೆಸಾರ್ಟ್ ಸ್ಪಾನಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ
‘ಬೆಸ್ಟ್ ಎಜ್ಯುಕೇಶನಲ್ ಬುಕ್ ಸಪ್ಲೈ ಅವಾರ್ಡ್’ಅನ್ನು ಸಂಸ್ಥೆಯ ಮಾಲಕರಾದ ಇಡ್ಕಿದು ಗ್ರಾಮದ ನೇರ್ಲಾಜೆ ನಿವಾಸಿ ದಿವಾಕರ್ ದಾಸ್ ನೇರ್ಲಾಜೆ ಹಾಗೂ ಅವರ ಪತ್ನಿ ಹೇಮಾವತಿ ದಿವಾಕರ ದಾಸ್ ರವರು ಪಡೆದುಕೊಂಡರು. ಖ್ಯಾತ ನಟಿ ರಾಶಿ ಖನ್ನಾರವರು ಪ್ರಶಸ್ತಿ ಪ್ರದಾನ ಮಾಡಿದರು‌‌. ಟೈಮ್ಸ್ ಗ್ರೂಪ್ಸ್ ನಡೆಸಿದ ಸಮೀಕ್ಷೆಯಲ್ಲಿ ಕಂಡು ಬಂದಂತೆ ಮೈಸೂರಿನ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ಈ ಪ್ರಶಸ್ತಿ ಲಭಿಸಿದೆ.

ದಿವಾಕರದಾಸ್ ನೇರ್ಲಾಜೆಯವರು ಮಾಲಕತ್ವದಲ್ಲಿರುವ ಎಸ್.ಎಲ್.ವಿ. ಬುಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಳೆದ ಹಲವಾರು ವರುಷಗಳಿಂದ ಶಾಲಾಕಾಲೇಜುಗಳ ಪುಸ್ತಕ ಮಾರಾಟದಲ್ಲಿ ತನ್ನದೇ ಆದೆ ರೀತಿಯಲ್ಲಿ ಮುನ್ನಡೆಯುತ್ತಿದ್ದು ರಾಜ್ಯದಲ್ಲೇ ನಂಬರ್ ೧ ಸ್ಥಾನದಲ್ಲಿದೆ. ಉಳಿದಂತೆ ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಎಸ್.ಎಲ್.ವಿ‌. ಬುಕ್ಸ್ ಏಜೇನ್ಸೀಸ್ ರಿಟೈಲ್ ಔಟ್ಲೇಟ್ ಅನ್ನು ಹೊಂದಿ ಜನಮನ್ನಣೆ ಗಳಿಸಿದೆ.

Ashika S

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

11 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

34 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago