News Karnataka Kannada
Friday, May 03 2024
ಮಂಗಳೂರು

ಬಂಟ್ವಾಳ: ಸುರಿಬೈಲು ನಿವಾಸಿ ಎಸ್.ಎಂ ಅಬೂಬಕ್ಕರ್ ಅನಾರೋಗ್ಯದಿಂದ ನಿಧನ

Bantwal
Photo Credit : By Author

ಬಂಟ್ವಾಳ: ಕೊಳ್ನಾಡು ಗ್ರಾಮದ ಸುರಿಬೈಲು ನಿವಾಸಿ ಎಸ್.ಎಂ ಅಬೂಬಕ್ಕರ್(60) ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು.

ಸುರಿಬೈಲ್ ಸರಕಾರಿ ಉನ್ನತ್ತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಹಲವಾರು ವರ್ಷಗಳಿಂದ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದರು. ಶಾಲೆಯಲ್ಲಿ ಸುತ್ತಲೂ ಹೂದೋಟ, ತರಕಾರಿ, ಅಡಿಕೆ ಮರ ನೆಟ್ಟು ಅದರ ಪೋಷಣೆ ಮಾಡುತ್ತಿದ್ದರು. ಇವರ ಪರಿಶ್ರಮದಿಂದ ಈ ಶಾಲೆಗೆ ರಾಷ್ಟ್ರೀಯ ಪರಿಸರ ಪ್ರಶಸ್ತಿ ಸಹಿತ ಮೊದಲಾದ ಗೌರವಗಳು ದೊರಕಿದೆ. ಇವರ ಗಣನೀಯ ಸೇವೆಯನ್ನು ಗೌರವಿಸಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದುಕೊಂಡಿದ್ದರು.‌

ರಾಜ್ಯ ಎಸ್ ಡಿ ಎಂ ಸಿ ಸಮಿತಿಯಲ್ಲಿ ಪದಾಧಿಕಾರಿಯಾಗಿ, ಸುರಿಬೈಲು ಮಸೀದಿಯ ಆಡಳಿತ ಸಮಿತಿಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದು, ಕೊಳ್ನಾಡು ಗ್ರಾಮ ಪಂಚಾಯತ್ ನಲ್ಲಿ ಎರಡು ಅವಧಿಯಲ್ಲಿ ಸದಸ್ಯರಾಗಿದ್ದರು. ಕೊಡುಗೈ ದಾನಿಯಾಗಿದ್ದರು. ಮೃತರಿಗೆ ಪತ್ನಿ ಇದ್ದಾರೆ.

ಮಾಜಿ ಸಚಿವ ಬಿ ರಮಾನಾಥ ರೈ, ಜಿಲ್ಲಾ ಪಂಚಾಯತ್ ಸದಸ್ಯ ಎಂ ಎಸ್ ಮಹಮ್ಮದ್, ಕಾಂಗ್ರೆಸ್ ಪಂಚಾಯತ್ ರಾಜ್ ಸಮಿತಿಯ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ ಮೊದಲಾದವರು ಭೇಟಿ ನೀಡಿ, ಅಂತಿಮ ದರ್ಶನ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
153
Mounesh V

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು