News Karnataka Kannada
Sunday, May 05 2024
ಮಂಗಳೂರು

ಬಂಟ್ವಾಳ: ಆಸ್ಪತ್ರೆಗೆ ತೆರಳಿ ರಕ್ತದೊತ್ತಡ ಪರೀಕ್ಷೆ ನಡೆಸಿದ ಶ್ರೀನಿವಾಸ ಪೂಜಾರಿ

srinivas-poojary-visited-the-hospital-and-conducted-a-blood-pressure-test
Photo Credit : News Kannada

ಬಂಟ್ವಾಳ: ಸಮಾಜಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿ ರಕ್ತದೊತ್ತಡ ಪರೀಕ್ಷೆ ನಡೆಸಿದರು.

ಅವರು ಮಾ.18 ರಂದು ಬೆಳಿಗ್ಗೆ 10.30 ಗಂಟೆಯ ವೇಳೆ ಬೆಂಗಳೂರಿಗೆ ತೆರಳುತ್ತಿದ್ದ ಸಚಿವರು ದಾರಿ ಮಧ್ಯೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿ, ಸಾಮಾನ್ಯರಂತೆ ಸಾಲಿನಲ್ಲಿ ನಿಂತು ವೈದ್ಯರ ಬಳಿ ರಕ್ತದೊತ್ತಡ ಪರೀಕ್ಷೆ ಮಾಡಿಸಿದರು.

ಆಡಳಿತ ವೈದ್ಯಾಧಿಕಾರಿ ಡಾ| ಪುಷ್ಪಲತಾ ಅವರು ಕಚೇರಿಗೆ ಬಂದು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿಸಿದರೂ, ಅವರು ವಿನಂತಿಯನ್ನು ನಿರಾಕರಿಸಿ , ರೋಗಿಗಳ ಜೊತೆಗೇ ಪರೀಕ್ಷೆ ಮಾಡಿಸಿಕೊಂಡು ,ಸರಳತೆ ಮೆರೆದರು.

‌ ಅವರು ಇಂದು ತುರ್ತಾಗಿ ಬೆಂಗಳೂರಿನಲ್ಲಿ ನಡೆಯುವ ಮೀಟಿಂಗ್ ನಲ್ಲಿ ಭಾಗವಹಿಸುವ ಹಿನ್ನೆಲೆಯಲ್ಲಿ ಕಾರಿನಲ್ಲಿ ತೆರಳುತ್ತಿದ್ದ ವೇಳೆ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರು ದಾರಿ ಮಧ್ಯೆ ಸರಕಾರಿ ಆಸ್ಪತ್ರೆಗೆ ತೆರಳಿದರು.

ಕಳೆದ ಕೆಲ ದಿನಗಳಿಂದ ಕಾರ್ಯಕ್ರಮದ ಒತ್ತಡ ಹಾಗೂ ಸರಿಯಾಗಿ ನಿದ್ರೆಯಿಲ್ಲದ ಕಾರಣ ಇವರಿಗೆ ತಲೆನೋವು ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ವೈದ್ಯರು ಪರೀಕ್ಷೆ ನಡೆಸಿ ರಕ್ತದೊತ್ತಡ ನಾರ್ಮಲ್ ಎಂದು ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಅರೋಗ್ಯ ರಕ್ಷಾ ಸಮಿತಿ ಸದಸ್ಯ ವಿಶ್ವನಾಥ ಚೆಂಡ್ತಿಮಾರ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು