ಬಂಟ್ವಾಳ: ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ರಾಜ್ಯ ಮಟ್ಟದ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರಶಸ್ತಿ ಕಾರ್ಯಕ್ರಮವು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸ್ಯಾಕ್ಸೋಫೋನ್ ವಾದನದಲ್ಲಿ ವಿಟ್ಲದ ವಿಜಯ ಕುಮಾರ್ ಮತ್ತು ಜಯ ದಂಪತಿಯ ಪುತ್ರಿ ದಕ್ಷಾ ರವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಅನೇಕ ಗಣ್ಯರು, ಸಾಧಕರು ಈ ಸಮಾರಂಭಕ್ಕೆ ಸಾಕ್ಷಿಗಳಾಗಿದ್ದರು.