News Karnataka Kannada
Wednesday, May 01 2024
ಮಂಗಳೂರು

ಬಂಟ್ವಾಳ: ವಕೀಲರ ಸಂಘದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

Swearing-in ceremony of office bearers of Bar Association
Photo Credit : News Kannada

ಬಂಟ್ವಾಳ: ವಕೀಲರ ಸಂಘ (ರಿ ) ಬಂಟ್ವಾಳ ಇದರ 2023-25 ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಸ್ಪರ್ಶ ಕಲಾ ಮಂದಿರ ಬಿ.ಸಿ. ರೋಡ್ ನಲ್ಲಿ ನಡೆಯಿತು.

2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ರಿಚರ್ಡ್ ಕೊಸ್ತಾ ಎಂ, ಉಪಾಧ್ಯಕ್ಷರಾಗಿ ರಾಜೇಶ್ ಬೊಳ್ಳುಕಲ್ಲು, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಡಿ ಬೈರಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಸುನಿತಾ ಕೆ ಕೆ, ಕೋಶಾಧಿಕಾರಿಯಾಗಿ ಶ್ರೀಮತಿ ನಿರ್ಮಲ ಶೆಟ್ಟಿಯವರು ಪ್ರಮಾಣವಚನ ಸ್ವೀಕರಿಸಿದರು. ದೀಪಬೆಳಗಿಸುವುದರ ಮುಖಾoತರ ಕಾರ್ಯಕ್ರಮ ಉದ್ಘಾಟಿಸಿದ ಅಂಕೋಲದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮನೋಹರ ಎಂ ಅವರು ಚಾಲನೆ ನೀಡಿ ನೂತನ ಪದಾಧಿಕಾರಿಗಳಿಗೆ ಪ್ರಮಾಣ ವಚನ ನೀಡಿ ಶುಭಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಂಟ್ವಾಳದ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ಭಾಗ್ಯಮ್ಮ, ಪ್ರಧಾನ ಸಿವಿಲ್ ನ್ಯಾಯಾಧಿಶರಾದ ಚಂದ್ರಶೇಖರ ಎಲ್ಲಪ್ಪ ತಳವಾರ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧಿಶರಾದ ಕೃಷ್ಣಮೂರ್ತಿ ಯನ್ ಅವರು ಭಾಗವಹಿಸಿದ್ದರು.

ವಕೀಲರ ಸಂಘ (ರಿ) ಬಂಟ್ವಾಳದ ನಿರ್ಗಮಿತ ಅಧ್ಯಕ್ಷರಾದ ಗಣೇಶಾನಂದ ಸೋಮಯಾಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ವಕೀಲರ ಸಂಘ (ರಿ ) ಬಂಟ್ವಾಳದ ಎಲ್ಲಾ ಮಾಜಿ ಅಧ್ಯಕ್ಷರುಗಳನ್ನು ಸನ್ಮಾನಿಸಲಾಯಿತು. ಪ್ರಸಾದ್ ಕುಮಾರ್ ರೈ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಡಿ ಬೈರಿಕಟ್ಟೆ ಧನ್ಯವಾದ ಸಲ್ಲಿಸಿದರು. ನರೇಂದ್ರನಾಥ ಭಂಡಾರಿಯವರು ಕಾರ್ಯಕ್ರಮ ನಿರ್ವಹಿಸಿದರು.

ಸಭಾ ಕಾರ್ಯಕ್ರಮದ ನಂತರ ವಿಠ್ಠಲ ನಾಯಕ್ ಕಲ್ಲಡ್ಕ ಅವರ ತಂಡದಿಂದ ವಿನೂತನ ಶೈಲಿಯ ಗೀತಾ ಸಾಹಿತ್ಯ ಸಂಭ್ರಮ ಕಾರ್ಯಕ್ರಮ ನಡೆಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು