Categories: ಮಂಗಳೂರು

ಬಂಟ್ವಾಳ: ಮಾವಿನಕಟ್ಟೆ ನಿವಾಸಿ ಟಿ.ನರಸಿಂಹ ಪೈ ನಾಪತ್ತೆ

ಬಂಟ್ವಾಳ: ತಾಲೂಕಿನ ಕುಕ್ಕಿಪಾಡಿ ಗ್ರಾಮದ ಮಾವಿನಕಟ್ಟೆ ನಿವಾಸಿ ಟಿ.ನರಸಿಂಹ ಪೈ (೩೮)ಅವರು ಆ.೨೧ರಂದು ಮನೆ ಬಿಟ್ಟು ಹೋದವರು ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಅವರ ಪತ್ನಿ ಪುಂಜಾಲಕಟ್ಟೆ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಟಿ. ನರಸಿಂಹ ಪೈ ಅವರು ತಮಿಳುನಾಡಿನಿಂದ ಹಪ್ಪಳ ತಂದು ಮಾವಿನಕಟ್ಟೆ ಎಂಬಲ್ಲಿ ಪ್ಯಾಕಿಂಗ್ ಮಾಡಿ ಅಂಗಡಿಗಳಿಗೆ ಲೈನ್ ಸೇಲ್ ಮಾಡುವ ಕೆಲಸ ಮಾಡಿಕೊಂಡಿದ್ದು, ಕಳೆದ ಕೊರೆನಾ ಸಮಯದಲ್ಲಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು. ಈ ಬಗ್ಗೆ ಹಾಸನ ಬ್ಯಾಂಕ್‌ನಲ್ಲಿ ಮಾತುಕತೆ ನಡೆಸಿ, ಸಂಬಂಧಿಕರ ಮನೆಗೆ ಹೋಗಿ ಬರುವುದಾಗಿ ತಿಳಿಸಿ ಪತ್ನಿಯನ್ನು ತಾಯಿ ಮನೆಗೆ ಬಿಟ್ಟು ಆ.೨೧ರಂದು ತೆರಳಿದವರು ಬಳಿಕ ಅವರ ಮೊಬಲ್ ಸ್ವಿಚ್ ಆಫ್ ಆಗಿದ್ದು, ಇದುವರೆಗೆ ಅವರು ಪತ್ತೆಯಾಗಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಟಿ.ನರಸಿಂಹ ಅವರು ಸುಮಾರು ೬ ಅಡಿ ಎತ್ತರ, ದಪ್ಪ ಶರೀರ, ಬಿಳಿ ಮೈಬಣ್ಣ, ಗಡ್ಡ, ಮೀಸೆ ಹಾಗೂ ತಲೆ ಕೂದಲು ಬಿಟ್ಟಿದ್ದು, ಬಿಳಿ ಬಣ್ಣದ ಪಂಚೆ, ಪಿಸ್ತಾ ಕಲರ್‌ನ ಶರ್ಟ್, ಕನ್ನಡಕ ಧರಿಸಿದ್ದಾರೆ. ಕನ್ನಡ, ಕೊಂಕಣಿ, ಹಿಂದಿ, ತುಳು, ತಮಿಳು ಭಾಷೆ ತಿಳಿದಿದ್ದಾರೆ. ಇವರ ಇರುವಿಕೆಯ ಬಗ್ಗೆ ಕಂಡು ಬಂದರೆ ಪುಂಜಾಲಕಟ್ಟೆ ಪೊಲೀಸ್ ಠಾಣೆ (೮೨೭೭೯೮೬೪೧೧)ಅಥವಾ ದ.ಕ.ಜಿಲ್ಲಾ ಕಂಟ್ರೋಲ್ ರೂಂ (೦೮೨೪-೨೨೨೦೫೦೦)ಗೆ ಸಂಪರ್ಕಿಸಲು ಕೋರಿದ್ದಾರೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago