ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲಾಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬಂಟ್ವಾಳ ಮತ್ತು ಸರಕಾರಿ ಪ್ರೌಢಶಾಲೆ ಕಾಡುಮಠ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ಕಾಡುಮಠ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಶೆಟ್ಟಿ ಅಗರಿ ಯವರು ಪಂದ್ಯಾಟವನ್ನು ಉದ್ಘಾಟಿಸಿದರು.
ಕೊಳ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ನೆಬಿಸಾ ಖಾದರ್ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯಲ್ಲಿ ಬಿಜೆಪಿ ರಾಜ್ಯ ವಕ್ತಾರರಾದ ವಿಕಾಸ್ ಪುತ್ತೂರು , ಉದ್ಯಮಿ ಮಾಧವ ಮಾವೆ, ಗ್ರಾಮ ಪಂಚಾಯತ್ ಸದಸ್ಯರಾದ ರಾಜಾರಾಮ್ ಹೆಗ್ಡೆ, ಲೋಹಿತ್, ಅನಿತಾ ಶೆಟ್ಟಿಗಾರ್, ಶಶಿಕಲಾ, ಸೌಮ್ಯಲತಾ, ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿಷ್ಣು ಹೆಬ್ಬಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರೋಹಿಣಿ ಬಿ, ಪ್ರಗತಿಪರ ಕೃಷಿಕರಾದ ಮನೋರಂಜನ್ ಕರೈ, ಸಾಲೆತ್ತೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಜಯಪ್ರಕಾಶ್ ಶೆಟ್ಟಿ ಮೇರಾವು, ವಿಟ್ಲ ಲಯನ್ಸ್ ಅಧ್ಯಕ್ಷರಾದ ಸುಧೇಶ್ ಭಂಡಾರಿ ಎರ್ಮನಿಲೆ, ನಾರಾಯಣ ಶೆಟ್ಟಿ ಕುಲ್ಯಾರು, ಬಾಲಕೃಷ್ಣ ಸೆರ್ಕಳ, ಬಿ ಎಸ್ ಎನ್ ಎಲ್ ನಿವೃತ್ತ ಇಂಜಿನಿಯರ್ ಗೋಪಾಲ್ ಕುಲಾಲ್, ಉದ್ಯಮಿ ಶ್ರೀಕಾಂತ್ ಶೆಟ್ಟಿ ಅಗರಿ, ಶಿಕ್ಷಕರ ಸಂಘಟನೆಗಳ ಪದಾಧಿಕಾರಿಗಳಾದ ಜೋಯಲ್ ಲೋಬೋ, ಶಿವಪ್ರಸಾದ್ ಶೆಟ್ಟಿ, ಚಿನ್ನಪ್ಪ, ಉಮಾನಾಥ್ ರೈ, ಮಹಮ್ಮದ್ ಆರೀಫ್, ಶಶಿಕಾಂತ್, ಭಾಸ್ಕರ್ ರಾವ್ ಉಪಸ್ಥಿತರಿದ್ದರು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಶ್ರೀ ಧೂಮಾವತಿ ಬಂಟ ದೈವಗಳ ಸೇವಾ ಟ್ರಸ್ಟ್ ಅಧ್ಯಕ್ಷರೂ, ನಿವೃತ್ತ ಸೈನಿಕ ವಿಠಲ ಶೆಟ್ಟಿ ಅಗರಿ ವಹಿಸಿ ಪ್ರಶಸ್ತಿಯನ್ನು ವಿತರಿಸಿದರು. ವೇದಿಕೆಯಲ್ಲಿ ಶಾಲಾ ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಶಾಂತ್ ಕುಮಾರ್ ಶೆಟ್ಟಿ ಅಗರಿ, ನಿವೃತ್ತ ಶಿಕ್ಷಕರಾದ ಬಾಬು ಮಾಸ್ಟರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕರಾದ ತಾರೇಶ್ ನಾಯ್ಕ ಕೆ ಎಲ್ ಸ್ವಾಗತಿಸಿ, ದೈಹಿಕ ಶಿಕ್ಷಣ ಶಿಕ್ಷಕರಾದ ಶ ಇಬ್ರಾಹಿಂ ವಂದಿಸಿದರು. ಪರಮೇಶ್ವರ ಹೆಗಡೆ ಕಾರ್ಯಕ್ರಮ ನಿರ್ವಹಿಸಿದರು.
ಫಲಿತಾಂಶ: ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ತುಂಬೆ ಆಂಗ್ಲ ಮಾಧ್ಯಮ ಪ್ರೌಢಶಾಲೆ ತುಂಬೆ ಎರಡೂ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆಯುವುದರ ದಾಖಲೆಯನ್ನು ನಿರ್ಮಿಸಿದೆ. ಬಾಲಕರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಕಡೇಶಿವಾಲಯ ಮತ್ತು ಬಾಲಕಿಯರ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ನಾರ್ಶ ಮೈದಾನ ದ್ವಿತೀಯ ಸ್ಥಾನ ಪಡೆದುಕೊಂಡವು.