ಬಂಟ್ವಾಳ: ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 168 ನೇ ಜನ್ಮ ದಿನಾಚರಣೆಯು ಬಿ.ಸಿ.ರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದಲ್ಲಿ ಸೆ.11 ರ ಆದಿತ್ಯವಾರ ನಡೆಯಲಿದೆ ಎಂದು ಬಿಲ್ಲವ ಮುಖಂಡ ಹರಿಕೃಷ್ಣ ಬಂಟ್ವಾಳ್ ಅವರು ತಿಳಿಸಿದರು.
ಅವರು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನದ ಕಚೇರಿ ಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ತಿಳಿಸಿದ ಅವರು, ಕನ್ಯಾಡಿ ಕ್ಷೇತ್ರದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರು ಆಶೀರ್ವಚನ ನೀಡಲಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು,ಸಚಿವ ಸುನಿಲ್ ಕುಮಾರ್ ಅವರು ಅತಿಥಿ ಯಾಗಿ ಆಗಮಿಸಲಿದ್ದಾರೆ. ತುಳು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಎಂ.ತುಂಗಪ್ಪ ಬಂಗೇರ, ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ವಿಜೇತೆ ಶೈಲಜಾರಾಜೇಶ್, ರಕ್ತೇಶ್ವರಿ ದೇವಸ್ಥಾನದ ಅಧ್ಯಕ್ಷ ವಿಶ್ವನಾಥ ಪೂಜಾರಿ,ಅವರನ್ನು ಸನ್ಮಾನಿಸಲಾಗುತ್ತದೆ. ವಿದುಷಿ ಡಾ. ದಾಕ್ಷಾಯಿಣಿ ಕಂದೂರು, ರ್ಯಾಂಕ್ ವಿಜೇತೆ ಸ್ವಾತಿ ಕುದ್ಕೊಳಿ ಅವರನ್ನು ಗೌರವಿಸಲಾಗುವುದು ಎಂದ ಅವರು, ಮಧ್ಯಾಹ್ನದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್, ಕೋಶಾಧಿಕಾರಿ ಉಮೇಶ್ ಸುವರ್ಣ, ಪ್ರಧಾನ ಕಾರ್ಯದರ್ಶಿ ರಮೇಶ್ ತುಂಬೆ, ಉಪಾಧ್ಯಕ್ಷ ಮಹಾಬಲ ಬಂಗೇರ, ಲೆಕ್ಕಪರಿಶೋಧಕ ಸತೀಶ್ ಬಿ.ಜತೆ ಕಾರ್ಯದರ್ಶಿ ಆನಂದ ಸಾಲಿಯಾನ್ ಉಪಸ್ಥಿತರಿದ್ದರು.